September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಜನಜಾಗೃತಿ ವೇದಿಕೆ ಕಣಿಯೂರು ವಲಯ ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಮಲ್ಲೆಂಗಲ್ಲು ಇದರ ಜಂಟಿ ಆಶ್ರಯದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸದಾನಂದ ಮೆಲ್ಲಂಟ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಮಾಜಿ ತಾಲೂಕು ಸಮಿತಿ ಸದಸ್ಯರು ಶ್ರೀಮತಿ ರಾಜಶ್ರೀ ಎಸ್.ಹೆಗ್ಡೆ ರವರು ಪೂಜ್ಯರು ಸಮಾಜಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದರು. ವಿಶೇಷ ಆಹ್ವಾನಿತರಾಗಿ ಧರ್ಣಪ್ಪ ಗೌಡ ಬಾನಡ್ಕ ಒಕ್ಕೂಟದ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ ಹಾಗೂ ಉಮಾಮಹೇಶ್ವರ ದೇವಸ್ಥಾನ ಮಲ್ಲೆಂಗಲ್ಲು ಇದರ ಆಡಳಿತ ಮೊಕ್ತೇಸರರಾದ ಚಿದಾನಂದ ರಾವ್ ಕೊಲ್ಲಜೆ ಉಪಸ್ಥಿತರಿದ್ದರು.


ರೈತ ಬಂಧು ಮಾಲಕರು ಶಿವಶಂಕರ್ ನಾಯಕ್ ರವರು ಸ್ವಾಗತಿಸಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಸೀತಾ ಪ್ರಾರ್ಥನೆ ಮಾಡಿದರು.ಕಣಿಯೂರು ವಲಯದ ಮೇಲ್ವಿಚಾರಕರಾದ ಶಿಲ್ಪಾ ರವರು ಕಾರ್ಯಕ್ರಮವನ್ನು ನಿರೂಪಿಸಿದರು, ಸೇವಾಪ್ರತಿನಿಧಿಯಾದ ಸೀತಾರಾಮ ಆಳ್ವ ರವರು ಧನ್ಯವಾದ ನೀಡಿದರು. ಈ ಸಂಧರ್ಭದಲ್ಲಿ ಜನಜಾಗೃತಿ ವಲಯಾಧ್ಯಕ್ಷ ಪ್ರಫುಲ್ಲ ಚಂದ್ರ ಅಡ್ಯಂತಾಯ, ಸಿಎ ಬ್ಯಾಂಕ್ ಪದ್ಮುಂಜ ಇದರ ಅಧ್ಯಕ್ಷ ರಕ್ಷಿತ್ ಶೆಟ್ಟಿ, ತಿಮ್ಮಯ್ಯ ಗೌಡ ಪದ್ಮುಂಜ, ಸುದರ್ಶನ ಹೆಗ್ಡೆ ಕಣಿಯೂರು ಗುತ್ತು, ಸೀತಾರಾಮ ಮಡಿವಾಳ ಗ್ರಾಮ ಪಂಚಾಯತ್ ಅಧ್ಯಕ್ಷರು ಕಣಿಯೂರು, ವಿಠಲ ಶೆಟ್ಟಿ ಕೊಲ್ಲೊಟ್ಟು ಹಾಗೂ ಊರಿನ ಗಣ್ಯರು, ಊರಿನ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಫೆ.6: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!