ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್ ಶೌರ್ಯ ಘಟಕ ಗುರುವಾಯನಕೆರೆ ತಾಲೂಕಿನ ಸಂಯುಕ್ತ ಆಶ್ರಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಮಮತಾ ಶೆಟ್ಟಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಬೆಳ್ತಂಗಡಿ ಘಟಕ ಶಶಿ ರಾಜ್ ಶೆಟ್ಟಿ, ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಕಾಮತ್,ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ ಪಂಚಾಯತ್ ಸದಸ್ಯರಾದ ಮಂಜುನಾಥ ತಾಲೂಕಿನ ಯೋಜನಾಧಿಕಾರಿ ಅಶೋಕ ಮೇಲ್ವಿಚಾರಕರು,ತಾಲೂಕಿನ ಶೌರ್ಯ ವಿಪತ್ತು ಘಟಕದ ಸದಸ್ಯರು ಒಕ್ಕೂಟದ ಸದಸ್ಯರ ಸ್ಥಳೀಯರು ಸ್ವಚ್ಛತ ಶ್ರಮದಾನದಲ್ಲಿ ಭಾಗವಹಿಸಿದರು











