ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಪ್ರಯುಕ್ತ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘದ ವತಿಯಿಂದ ಅಭಿನಂದನೆಗಳನ್ನು ತಿಳಿಸಲಾಯಿತು.

ಈ ವೇಳೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರನ್ನು ಭೇಟಿ ಮಾಡಿ ಸಂಘಟನೆಯ ಚಟುವಟಿಕೆಗಳು ಹಾಗೂ ಸೇವಾ ಕಾರ್ಯಗಳ ಕುರಿತು ವಿವರಗಳನ್ನು ಹಂಚಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಆಗಸ್ಟೀನ್, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ ಟಿ, ಕಾರ್ಯದರ್ಶಿ ಶಿಜೋ ಜೋಸೆಫ್, ಮಾಜಿ ಉಪಾಧ್ಯಕ್ಷ ಶಾಜಿ ತೋಮಸ್, ಮಾಜಿ ಕಾರ್ಯದರ್ಶಿ ತೋಮಸ್, ಸಂಘದ ಸದಸ್ಯ ಶೆರ್ಲಿ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.











