ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 77ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಿಯೋನ್ ಆಶ್ರಮಕ್ಕೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ವತಿಯಿಂದ ಆಹಾರ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಹುಟ್ಟುಹಬ್ಬದ ಕೇಕ್ ಕತ್ತರಿಸಿ, ಆಶ್ರಮ ನಿವಾಸಿಗಳಿಗೆ ಸಿಹಿ ಹಂಚಲಾಯಿತು.

ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಯೋಜನಾಧಿಕಾರಿ ಸುರೇಶ್ ಮಾತನಾಡಿ, ಹೆಗ್ಗಡೆಯವರ ಮಾನವಸೇವೆ ಮತ್ತು ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಸ್ಪೂರ್ತಿದಾಯಕವೆಂದು ಹೇಳಿದರು. ಸಿಯೋನ್ ಆಶ್ರಮದೊಂದಿಗೆ ಇರುವ ಬಾಂಧವ್ಯವನ್ನು ಸ್ಮರಿಸಿಕೊಂಡ ಅವರು, ಆಶ್ರಮದ ಸೇವಾ ಚಟುವಟಿಕೆಗಳನ್ನು ಪ್ರಶಂಸಿಸಿದರು.
ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ. ಯು.ಸಿ. ಪೌಲೋಸ್ ರವರು ಪೂಜ್ಯರ ಸೇವಾಧರ್ಮ ಮತ್ತು ಸಮಾಜೋದ್ಧಾರದ ಕಾರ್ಯವೈಖರಿಯನ್ನು ಸಂಕ್ಷಿಪ್ತವಾಗಿ ವಿವರಿಸಿ, ಶ್ರೀ ಕ್ಷೇತ್ರದಿಂದ ದೊರೆಯುತ್ತಿರುವ ಸಹಕಾರವು ಆಶ್ರಮದ ಸೇವಾ ಕಾರ್ಯಗಳಿಗೆ ಬಲವರ್ಧಕವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಯೋಜನಾಧಿಕಾರಿ ಮಂಜುನಾಥ, ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಯಶೋಧರ, ಜ್ಞಾನವಿಕಾಸ ವಿಭಾಗದ ಯೋಜನಾಧಿಕಾರಿ ಶ್ರೀಮತಿ ಅಮೃತ, ಜನಜಾಗೃತಿ ಮಾಜಿ ಅಧ್ಯಕ್ಷ ಡಿ.ರಹಿಮಾನ್, ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರಾದ ಶ್ರಿಮತಿ ಮೇರಿ ಯು.ಪಿ., ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಮುಂಡಾಜೆ ವಲಯ ಮೇಲ್ವಿಚಾರಕರಾದ ಗಣೇಶ್, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಸಿಯೋನ್ ಆಶ್ರಮದ ಸಿಬ್ಬಂದಿಗಳು, ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ಸಿಯೋನ್ ಸಿಬ್ಬಂದಿ ಶ್ರೀಮತಿ ದಿನಾವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!