ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶಾಂತಿವನ ಟ್ರಸ್ಟ್ ವತಿಯಿಂದ ಡಾ.ಹೆಗ್ಗಡೆಯವರನ್ನು ಗೌರವಿಸಲಾಯಿತು.

78 ನೇ ಜನುಮ ದಿನದ ಅಂಗವಾಗಿ ಕೇಕ್ ಕಟ್ ಮಾಡಿ, ಫಲಪುಷ್ಪ ನೀಡಿ ಧರ್ಮಾಧಿಕಾರಿಯವರ ಜನ್ಮದಿನವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಶಾಂತಿವನ ಟ್ರಸ್ ಕಾರ್ಯದರ್ಶಿ ಬಿ.ಸೀತರಾಮ ತೋಳ್ಪಾಡಿತ್ತಾಯ, ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಸಾದ್, ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಶಾಂತ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ.ಸುಜಾತ, ಡೀನ್ ಡಾ.ಗೀತಾ,ಡೀನ್ ಡಾ ಬಿಂದು ಹಾಗೂ ಶಾಂತಿವನದ ಆಡಳಿತಧಿಕಾರಿ ಜಗನ್ನಾಥ್ ಮತ್ತು ಕಾಲೇಜಿನ ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











