July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.

ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ ನಿರ್ಮಾಣಕ್ಕೆ ಪ್ರಯತ್ನಿಸಬೇಕು. ನಿಮ್ಮ ನಿರಂತರ ಪ್ರಯತ್ನ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನಮಗಿದೆ.

ನಿಮಗೆ ಸುಖ-ಶಾಂತಿ, ಸಂತೋಷ ಮತ್ತು ಆರೋಗ್ಯ ಸದಾ ಇರಲೆಂದು ಹಾರೈಸುತ್ತೇನೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡಾ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.ಗೃಹಸಚಿವ ಅಮಿತ್ ಶಾ ಕೂಡಾ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya
error: Content is protected !!