24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

ಉಜಿರೆ:ನ25.”ಪಡೆದ ಉಪಕಾರವನ್ನು ನೆನಪು ಮಾಡಿಕೊಂಡಾಗ ನಾವು ಕೃತಜ್ಞರಾಗುತ್ತೇವೆ ಹಾಗೂ ಪೂಜ್ಯರ ಮಾರ್ಗದರ್ಶನದೊಂದಿಗೆ ಎಸ್.ಡಿ.ಎಮ್ ಸಂಸ್ಥೆಯಲ್ಲಿ ವಿದ್ಯೆಯನ್ನು ಪಡೆಯುತ್ತಿರುವ ನೀವು ನಾವೆಲ್ಲರೂ ಧನ್ಯರು” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ರಿಜಿಸ್ಟ್ರಾರ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಧರ ಭಟ್ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮದ ಅಂಗವಾಗಿ ಆಯೋಜಿಸಿದ “ಸಂಸ್ಥಾಪಕರ ದಿನ (Founder’s day)” ಶೀರ್ಷಿಕೆಯಲ್ಲಿ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ, ಶಾಲಾ ವಿದ್ಯಾರ್ಥಿಗಳು ರಚಿಸಿದ ಸುವಿಚಾರ ಪುಸ್ತಕ ಹಾಗೂ ಸ್ಕ್ರಾಪ್ ಪುಸ್ತಕವನ್ನು ಬಿಡುಗಡೆಗೊಳಿಸಿ, ಪೂಜ್ಯರು ನಡೆದು ಬಂದ ಹಾದಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ದಾನ ಪರಂಪರೆಯ ಕುರಿತು ಮೌಲ್ಯಾಧಾರಿತ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಂದ ಪೂಜ್ಯರಿಗೆ ಶುಭಾಶಯ ಭಾಷಣ, 6ನೇ ಹಾಗೂ 8ನೇ ತರಗತಿಯ ವಿದ್ಯಾರ್ಥಿನಿಯರಿಂದ ಶಿಕ್ಷಕಿ ಸುಮಾ ಶ್ರೀನಾಥ್ ಅವರು ರಚಿಸಿರುವ ಪದ್ಯದ ಗುಂಪು ಗಾಯನ, ವಿದ್ಯಾರ್ಥಿಗಳಿಂದ ಪಂಚ ದಾನಗಳಾದ ವಿದ್ಯಾದಾನ, ಅನ್ನದಾನ, ವಸ್ತ್ರದಾನ, ಔಷಧದಾನ ಹಾಗೂ ವಸತಿ ದಾನಗಳ ಪ್ರಸ್ತುತಿ, 8ನೇ ತರಗತಿ ವಿದ್ಯಾರ್ಥಿನಿಯರಿಂದ ಸಮೂಹ ನೃತ್ಯ ಆಯೋಜಿಸಲಾಗಿತ್ತು.

ಪೂಜ್ಯರ ಜನ್ಮದಿನದ ಅಂಗವಾಗಿ ಶಾಲೆಯಲ್ಲಿ ತರಗತಿವಾರು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಸ್ಕ್ರಾಪ್ ಪುಸ್ತಕ ತಯಾರಿ, ಭಿತ್ತಿ ಚಿತ್ರ ತಯಾರಿ, ಪೋಸ್ಟರ್ ತಯಾರಿ, ಶುಭಾಶಯ ಪತ್ರ ತಯಾರಿ ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಇದರ ಪ್ರದರ್ಶನ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya
error: Content is protected !!