July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯ ವತಿಯಿಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ಮನವಿ ಪತ್ರ ಸಲ್ಲಿಸಿದರು.

2005ರಲ್ಲಿ ಸರ್ಕಾರದಿಂದ ಅನುಮತಿ ಪಡೆಯುವಾಗ 2008ರ ವರೆಗೆ ಎಲ್ಲಾ ಕುಟುಂಬಗಳನ್ನು ಪುನ‌ರ್ ವಸತಿಗೊಳಿಸಿದಾಗ ಉಲ್ಲೇಖ ಮಾಡಿರುತ್ತಾರೆ ಆದರೆ 2025 ವರ್ಷ ಕಳೆದರೂ ಈವರೆಗೂ ಪುನರ್ವಸತಿ ಗೊಳಿಸುವ ಕಾರ್ಯ ಪೂರ್ಣಗೊಳಿಸುವುದಿಲ್ಲ. ಹಣದುಬ್ಬರದಿಂದ ಜಮೀನು ಮತ್ತು ಮನೆಗಳು ಸೇರಿದಂತೆ ಸರಕು ಸೇವೆಗಳ ಬೆಲೆಗಳು ಗಗನ ಕೇಳುತ್ತಿದ್ದ ಹಣದ ಮೌಲ್ಯಯು ಕಾಲಕಾಲಕ್ಕೆ ಏರಿಳಿತಕ್ಕೆ ಒಳಗಾಗುತ್ತಿದ್ದ ಶೇಕಡ ಐದರಿಂದ ಆರು ಪ್ರತಿಶತ ಹಣದ ಮೌಲ್ಯವು ಕಡಿಮೆಯಾಗಿರುತ್ತದೆ ಆದರೆ ಭೂಮಿಯ ಬೆಲೆಯು ನಾಲೈದು ಪಟ್ಟು ಹೆಚ್ಚಾಗಿರುತ್ತದೆ. ಈಗ ಕೊಡುತ್ತಿರುವ ಪುನರ್ವಸತಿ ಮೌಲ್ಯದಿಂದ ಅನೇಕ ಕುಟುಂಬಗಳು ಬೀದಿಯಲ್ಲಿ ಬೀಳುವ ಪರಿಸ್ಥಿತಿಯಲ್ಲಿದ್ದಾರೆ ಕಾರಣ ಸರ್ಕಾರ ಜಾಗವನ್ನು ಸಹ ನೀಡುತ್ತಿಲ್ಲ. ಹಾಗೂ ಸರ್ಕಾರ ನೀಡುತ್ತಿರುವ ಪುನರ್ವಸತಿ ಯೋಜನೆ ಅಡಿ ನೀರು ಹಣದಿಂದ ಬೇರೆ ಜಮೀನು ಮನೆಗಳನ್ನು ಕೊಳ್ಳಲು ಆಗುವುದಿಲ್ಲ ಆದ್ದರಿಂದ ಸರ್ಕಾರ ಯೋಜನೆಗಾಗಿ ಮೂಲ ನಿವಾಸಿಗಳು ತಾವು ಕಟ್ಟಿಕೊಂಡ ಬದುಕನ್ನು ಸರ್ಕಾರಕ್ಕೆ ಬಿಟ್ಟುಕೊಟ್ಟು ದಿಕ್ಕು ದೆಸೆ ಇಲ್ಲದೆ ಬಿಟ್ಟು ಹೋಗುವ ಪರಿಸ್ಥಿತಿ ಮತ್ತು ಸರ್ಕಾರ ಕೊಡುವ ಹಣ ನೆಲೆ ನಿಲ್ಲಲು ಸಾಕಾಗದೆ ಬೀದಿಯಲ್ಲಿ ಬೀಳುವ ಪರಿಸ್ಥಿತಿ ಒದಾಗಿ ಬಂದಿದೆ. ಆದ್ದರಿಂದ ಪುನ‌ರ್ ವಸತಿ ಪ್ಯಾಕೇಜ್ ನಲ್ಲಿ ಘೋಷಿಸಿರುವ ಎಲ್ಲಾ ಮೌಲ್ಯಗಳನ್ನು 2025 ಮಾರ್ಕೆಟ್ ದರಕ್ಕೆ ಹೋಲಿಕೆ ಮಾಡಿ ಮೇಲ್ಕಂಡ ಆದೇಶಗಳನ್ನು ಪುನ‌ರ್ ಪರಿಶೀಲಿಸಿ ಹೊಸ ಆದೇಶ ಮಾಡಿಸಿಕೊಡಬೇಕಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೀರೂರು ಸುಧಾಕರ್, ಅಂಬರೀಶ್, ನಾಗೇಶ್ ನಾಯಕ್, ಸುಧಾಕರ್, ದಿನೇಶ್ ಕೂಳೆಗದ್ದೆ ಪ್ರದೀಪ್ ಮುಂತಾದವರು ಹಾಜರಿದ್ದರು.

Related posts

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!