September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯ ವತಿಯಿಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ಮನವಿ ಪತ್ರ ಸಲ್ಲಿಸಿದರು.

2005ರಲ್ಲಿ ಸರ್ಕಾರದಿಂದ ಅನುಮತಿ ಪಡೆಯುವಾಗ 2008ರ ವರೆಗೆ ಎಲ್ಲಾ ಕುಟುಂಬಗಳನ್ನು ಪುನ‌ರ್ ವಸತಿಗೊಳಿಸಿದಾಗ ಉಲ್ಲೇಖ ಮಾಡಿರುತ್ತಾರೆ ಆದರೆ 2025 ವರ್ಷ ಕಳೆದರೂ ಈವರೆಗೂ ಪುನರ್ವಸತಿ ಗೊಳಿಸುವ ಕಾರ್ಯ ಪೂರ್ಣಗೊಳಿಸುವುದಿಲ್ಲ. ಹಣದುಬ್ಬರದಿಂದ ಜಮೀನು ಮತ್ತು ಮನೆಗಳು ಸೇರಿದಂತೆ ಸರಕು ಸೇವೆಗಳ ಬೆಲೆಗಳು ಗಗನ ಕೇಳುತ್ತಿದ್ದ ಹಣದ ಮೌಲ್ಯಯು ಕಾಲಕಾಲಕ್ಕೆ ಏರಿಳಿತಕ್ಕೆ ಒಳಗಾಗುತ್ತಿದ್ದ ಶೇಕಡ ಐದರಿಂದ ಆರು ಪ್ರತಿಶತ ಹಣದ ಮೌಲ್ಯವು ಕಡಿಮೆಯಾಗಿರುತ್ತದೆ ಆದರೆ ಭೂಮಿಯ ಬೆಲೆಯು ನಾಲೈದು ಪಟ್ಟು ಹೆಚ್ಚಾಗಿರುತ್ತದೆ. ಈಗ ಕೊಡುತ್ತಿರುವ ಪುನರ್ವಸತಿ ಮೌಲ್ಯದಿಂದ ಅನೇಕ ಕುಟುಂಬಗಳು ಬೀದಿಯಲ್ಲಿ ಬೀಳುವ ಪರಿಸ್ಥಿತಿಯಲ್ಲಿದ್ದಾರೆ ಕಾರಣ ಸರ್ಕಾರ ಜಾಗವನ್ನು ಸಹ ನೀಡುತ್ತಿಲ್ಲ. ಹಾಗೂ ಸರ್ಕಾರ ನೀಡುತ್ತಿರುವ ಪುನರ್ವಸತಿ ಯೋಜನೆ ಅಡಿ ನೀರು ಹಣದಿಂದ ಬೇರೆ ಜಮೀನು ಮನೆಗಳನ್ನು ಕೊಳ್ಳಲು ಆಗುವುದಿಲ್ಲ ಆದ್ದರಿಂದ ಸರ್ಕಾರ ಯೋಜನೆಗಾಗಿ ಮೂಲ ನಿವಾಸಿಗಳು ತಾವು ಕಟ್ಟಿಕೊಂಡ ಬದುಕನ್ನು ಸರ್ಕಾರಕ್ಕೆ ಬಿಟ್ಟುಕೊಟ್ಟು ದಿಕ್ಕು ದೆಸೆ ಇಲ್ಲದೆ ಬಿಟ್ಟು ಹೋಗುವ ಪರಿಸ್ಥಿತಿ ಮತ್ತು ಸರ್ಕಾರ ಕೊಡುವ ಹಣ ನೆಲೆ ನಿಲ್ಲಲು ಸಾಕಾಗದೆ ಬೀದಿಯಲ್ಲಿ ಬೀಳುವ ಪರಿಸ್ಥಿತಿ ಒದಾಗಿ ಬಂದಿದೆ. ಆದ್ದರಿಂದ ಪುನ‌ರ್ ವಸತಿ ಪ್ಯಾಕೇಜ್ ನಲ್ಲಿ ಘೋಷಿಸಿರುವ ಎಲ್ಲಾ ಮೌಲ್ಯಗಳನ್ನು 2025 ಮಾರ್ಕೆಟ್ ದರಕ್ಕೆ ಹೋಲಿಕೆ ಮಾಡಿ ಮೇಲ್ಕಂಡ ಆದೇಶಗಳನ್ನು ಪುನ‌ರ್ ಪರಿಶೀಲಿಸಿ ಹೊಸ ಆದೇಶ ಮಾಡಿಸಿಕೊಡಬೇಕಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೀರೂರು ಸುಧಾಕರ್, ಅಂಬರೀಶ್, ನಾಗೇಶ್ ನಾಯಕ್, ಸುಧಾಕರ್, ದಿನೇಶ್ ಕೂಳೆಗದ್ದೆ ಪ್ರದೀಪ್ ಮುಂತಾದವರು ಹಾಜರಿದ್ದರು.

Related posts

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya
error: Content is protected !!