July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥ ಶಾಲೆ ಬೆಳ್ತಂಗಡಿಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಮುಖ್ಯ ಅಭ್ಯಂಗತರಾಗಿ ಜೀವನ್ ಕುಮಾರ್ ಶೆಟ್ಟಿ ಜನರಲ್ ಮ್ಯಾನೇಜರ್ ಸಿರಿ ಗ್ರಾಮೋದ್ಯೋಗ ಇವರು ಆಗಮಿಸಿ, ಹೆಗ್ಗಡೆಯವರ ಗುರಿ ಅಭಿವೃದ್ಧಿ , ಏಳಿಗೆ ಬಗ್ಗೆ ತಿಳಿಯಪಡಿಸಿದರು.
ಈ ಸಂದರ್ಭದಲ್ಲಿ ಭಾಷಣ, ಡ್ರಾಯಿಂಗ್, ಗ್ರೀಟಿಂಗ್ ಕಾರ್ಡ್ ತಯಾರಿ ಸ್ಪರ್ಧೆ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.

ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು

ಶಿಕ್ಷಕರುಗಳಾದ ಸೌಮ್ಯ ಪಿ, ಸಹನಾ ಅಮಿತಾ, ಪ್ರವೀಣ್ ಎನ್ ,ನೀತಾ ಶ್ರೇಯಾಂಸ ಜೈನ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರ ಸಹಕರಿಸಿದರು. ಶ್ರೀಮತಿ ನೀತಾ ಸ್ವಾಗತಿಸಿ, ಅಮಿತಾ ಧನ್ಯವಾದವಿತ್ತರು. ಶಿಕ್ಷಕ ಶ್ರೇಯಾಂಸ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya
error: Content is protected !!