32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.

ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ ನಿರ್ಮಾಣಕ್ಕೆ ಪ್ರಯತ್ನಿಸಬೇಕು. ನಿಮ್ಮ ನಿರಂತರ ಪ್ರಯತ್ನ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನಮಗಿದೆ.

ನಿಮಗೆ ಸುಖ-ಶಾಂತಿ, ಸಂತೋಷ ಮತ್ತು ಆರೋಗ್ಯ ಸದಾ ಇರಲೆಂದು ಹಾರೈಸುತ್ತೇನೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡಾ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.ಗೃಹಸಚಿವ ಅಮಿತ್ ಶಾ ಕೂಡಾ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.

Related posts

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!