25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.

ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ ನಿರ್ಮಾಣಕ್ಕೆ ಪ್ರಯತ್ನಿಸಬೇಕು. ನಿಮ್ಮ ನಿರಂತರ ಪ್ರಯತ್ನ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನಮಗಿದೆ.

ನಿಮಗೆ ಸುಖ-ಶಾಂತಿ, ಸಂತೋಷ ಮತ್ತು ಆರೋಗ್ಯ ಸದಾ ಇರಲೆಂದು ಹಾರೈಸುತ್ತೇನೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡಾ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.ಗೃಹಸಚಿವ ಅಮಿತ್ ಶಾ ಕೂಡಾ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.

Related posts

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya
error: Content is protected !!