23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

ಬೆಳ್ತಂಗಡಿ : ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡ ಮೊಬಿನ್ಸ್ ಇಂಜಿನಿಯರಿಂಗ್ ಸೊಲ್ಯೂಷನ್ಸ್ ಕಂಪನಿಯವರು ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆಯನ್ನು ಲಾಯಿಲ ಗ್ರಾಮದಲ್ಲಿ ತೆರೆದಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ನೆರವೇರಿತು.

ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಫಲಾನುಭವಿಗಳಿಗೆ ಯಂತ್ರೋಪಕರಣಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಅರವಿಂದ ಲಾಯಿಲ, ಗಣೇಶ್ ಆರ್, ನಗರ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ,ಶಾಸಕರ ಆಪ್ತ ಕಾರ್ಯದರ್ಶಿ ಮಂಜುನಾಥ್ ಎಂ, ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸದರಿ ಕಂಪನಿಯಿಂದ ಖರೀದಿ ಮಾಡಿದ ಆಯ್ದ ಯಂತ್ರೋಪಕರಣಗಳಿಗೆ ಕೃಷಿ/ತೋಟಗಾರಿಕೆ ಇಲಾಖೆಯಿಂದ ಸಹಾಯಧನವು ಲಭ್ಯವಿದ್ದು ಇಂದು ಅರ್ಜಿ ಹಾಕಿದ ಅರ್ಹ 60 ಜನ ರೈತ ಫಲಾನುಭವಿಗಳಿಗೆ ತೋಟಗಾರಿಕೆ ಇಲಾಖೆಯ ಸಹಾಯಧನದಲ್ಲಿ ಅಡಿಕೆ ಮರ ಹತ್ತುವ ಯಂತ್ರೋಪಕರಣಗಳನ್ನು ಪ್ರಾತ್ಯಕ್ಷಿತೆ ನೀಡಿ ವಿತರಿಸಲಾಯಿತು.

Related posts

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳಾಲು: ಓಡಿಪ್ರೊಟ್ಟು ನಿವಾಸಿ ಉಮಾನಾಥ ಕೋಟ್ಯಾನ್ ನಿಧನ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya
error: Content is protected !!