22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

ಬೆಳ್ತಂಗಡಿ : ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡ ಮೊಬಿನ್ಸ್ ಇಂಜಿನಿಯರಿಂಗ್ ಸೊಲ್ಯೂಷನ್ಸ್ ಕಂಪನಿಯವರು ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆಯನ್ನು ಲಾಯಿಲ ಗ್ರಾಮದಲ್ಲಿ ತೆರೆದಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ನೆರವೇರಿತು.

ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಫಲಾನುಭವಿಗಳಿಗೆ ಯಂತ್ರೋಪಕರಣಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಅರವಿಂದ ಲಾಯಿಲ, ಗಣೇಶ್ ಆರ್, ನಗರ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ,ಶಾಸಕರ ಆಪ್ತ ಕಾರ್ಯದರ್ಶಿ ಮಂಜುನಾಥ್ ಎಂ, ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸದರಿ ಕಂಪನಿಯಿಂದ ಖರೀದಿ ಮಾಡಿದ ಆಯ್ದ ಯಂತ್ರೋಪಕರಣಗಳಿಗೆ ಕೃಷಿ/ತೋಟಗಾರಿಕೆ ಇಲಾಖೆಯಿಂದ ಸಹಾಯಧನವು ಲಭ್ಯವಿದ್ದು ಇಂದು ಅರ್ಜಿ ಹಾಕಿದ ಅರ್ಹ 60 ಜನ ರೈತ ಫಲಾನುಭವಿಗಳಿಗೆ ತೋಟಗಾರಿಕೆ ಇಲಾಖೆಯ ಸಹಾಯಧನದಲ್ಲಿ ಅಡಿಕೆ ಮರ ಹತ್ತುವ ಯಂತ್ರೋಪಕರಣಗಳನ್ನು ಪ್ರಾತ್ಯಕ್ಷಿತೆ ನೀಡಿ ವಿತರಿಸಲಾಯಿತು.

Related posts

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya
error: Content is protected !!