July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

ಉಜಿರೆ: ಕಾಲೇಜಿನ ವಾಣಿಜ್ಯ ವಿಭಾಗದ ಅನುಖ-2025 ಸಂಭ್ರಮಾಚರಣೆಯು ನ.24ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕರಾದ ವಂ.ಫಾ.ಅಬೆಲ್ ಲೋಬೋ,ಟ್ರೋಫಿಗಳ ಅನಾವರಣಗೊಳಿಸಿ ಚಾಲನೆ ನೀಡಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.


ಮುಖ್ಯ ಅಥಿತಿಗಳಾಗಿ ವಾಮದಪದವು ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಡಾ.ವಿಶಾಲ್ ಪಿಂಟೋ ಮಾತನಾಡಿ ಶಿಕ್ಷಣದಲ್ಲಿ ಮೌಲ್ಯಧಾರಿತ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತದೆ. ವಿದ್ಯಾರ್ಥಿ ಭವಿಷ್ಯ ರೂಪಿಸುತ್ತದೆ. ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಮಹತ್ವವನ್ನು ನೀಡಬೇಕು ಎಂದು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ. ವಿಜಯ್ ಲೋಬೋ ಮಾತನಾಡಿ ವಾಣಿಜ್ಯ ವಿಭಾಗದ ಅನುಖ -೨ಏ೨೫ ರ ಮಹತ್ವವನ್ನು ತಿಳಿಸಿದರು.ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ನಿರ್ದೆಶಕರಾದ ಶ್ರೀಮತಿ ಕಾವ್ಯಶ್ರೀ ,ಅನುಗ್ರಹ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಶ್ರೀಮತಿ ಐರಿನ್ ರೋಡ್ರಿಗಸ್, ಶ್ರೀಮತಿ ವಿನಯಲತಾ ಹಾಗೂ ವಾಣಿಜ್ಯ ಸಂಘದ ಕಾರ್ಯದರ್ಶಿ ಮಾರ್ಕ್, ರಿ಼ಷಾನ್ ಹಾಗೂ ಅನುಖ- ೨ಏ೨೫ರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಯುಕ್ತ ಅನುಗ್ರಹ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿನೆಸ್ ಕ್ವಿಜ್,ಕೊಲೇಜ್ ಸ್ಪರ್ಧೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಬೆಸ್ಟ್ ಟೀಮ್ ಮ್ಯಾನೆಜ್‌ಮೆಂಟ್ ,ವ್ಯಾಪಾರೋದ್ಯಮ,ಬಿಸಿನೆಸ್‌ಕ್ವಿಜ್, ವ್ಯಾವಹಾರಿಕ ಮಾದರಿ ತಯಾರಿಕೆ ಸ್ಪರ್ಧೆ ಏರ್ಪಡಿಸಿ ಬಹುಮಾನವನ್ನು ನೀಡಲಾಯಿತು.ಇದೇ ಸಂದರ್ಭದಲ್ಲಿ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವಾಣಿಜ್ಯ ಉಪನ್ಯಾಸಕಿ ಶ್ರೀಮತಿ ಕಾವ್ಯಶ್ರೀ ಸ್ವಾಗತಿಸಿ, ವಿದ್ಯಾರ್ಥಿ ನಾಯಕಿ ಹೆಝಲ್ ಜಿಶಾ ಪಿಂಟೋ ನಿರೂಪಿಸಿ, ಹಲೀಮಾ ನಜ್ಮೀನ್ ಧನ್ಯವಾದವಿತ್ತರು.

Related posts

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಎಸ್.ಡಿ.ಎಂ ರಸಾಯನಶಾಸ್ತ್ರ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya
error: Content is protected !!