March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಪರಮಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಗೆ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಧಳೀಯ ಸಂಸ್ಥೆಯ ವತಿಯಿಂದ ಹುಟ್ಟು ಹಬ್ಬದ ಶುಭಾಶಯವನ್ನು ಕೋರಲಾಯಿತು.

ಈ ಸಂದರ್ಭದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಎಂಬುದು ಒಂದು ದೊಡ್ಡ ಅಂತರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆ ಯಾವುದೇ ಕಾರಣಕ್ಕೂ ಇದನ್ನು ಬಿಡದೆ ಸಾಧನೆ ಮಾಡಿ ನಿಮ್ಮ ವ್ಯಕ್ತಿತ್ವವನ್ನು ಉನ್ನತವಾಗಿ ರೂಪಿಸಿಕೊಳ್ಳಿ. ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಡಾ ಎಂ.ಮೋಹನ್ ಆಳ್ವರ ಸಾಧನೆ ಮಹತ್ವದ್ದು, ಪಿಲಿಕುಲದಲ್ಲಿ ಅವರು ನಿರ್ಮಿಸುತ್ತಿರುವ ಸ್ಕೌಟ್ ಗೈಡ್ ತರಬೇತಿ ಕೇಂದ್ರವನ್ನು ನೋಡಿ ನನಗೆ ತುಂಬಾ ಅಚ್ಚರಿಯಾಗುತ್ತದೆ. ಅವರ ಕೆಲಸ ಸರ್ವರಿಗೂ ಅನುಕರಣೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಉಪಸ್ಥಿತರಿದ್ದ ರೋವರ್ ವಿದ್ಯಾರ್ಥಿಗಳಿಗೆ ಜೀವನದುದ್ದಕ್ಕೂ ಸ್ಕೌಟ್ ನಲ್ಲಿ ಮುಂದುವರೆಯುವಂತೆ ಹುರಿದುಂಬಿಸಿ ಶುಭ ಹಾರೈಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪ್ರಮೀಳಾ ಪೂಜಾರಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಉಜಿರೆಯ ರೋವರ್ ಸ್ಕೌಟ್ ಲೀಡರ್ ಲಕ್ಷ್ಮೀಶ ಪಿ ಭಟ್ ಹಾಗೂ ರೋವರ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!