25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಿಕ್ಷಣ ಸಂಸ್ಥೆ

ಪ್ರಸನ್ನ ಆಯುರ್ವೇದ ಮತ್ತು ನರ್ಸಿಂಗ್ ಕಾಲೇಜುಗಳ ಪದವಿ ಪ್ರದಾನ‌ ಸಮಾರಂಭ

ಬೆಳ್ತಂಗಡಿ:ಗುರು ಶಿಷ್ಯರು, ತಂದೆ ತಾಯಿ ಮೊದಲಾದ ಸಂಬಂಧಗಳೇ ನಶಿಸಿ‌ಹೋಗಿರುವ ಸಮಾಜದಲ್ಲಿ ವೈದ್ಯರು ಮತ್ತು ದಾದಿಯರು ತಾಯಿ‌ಹೃದಯದ ಮೂಲಕ ತಮ್ಮ ಸೇವೆ ಸಲ್ಲಿಸಿ ಮತ್ತೆ ಈ ಸಂಬಂಧಗಳನ್ನು ಮತ್ತೆ ಬೆಸೆದು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಅಣಿಯಾಗಬೇಕಾದ ಅಗತ್ಯತೆ ಇದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ಎಲ್ ಭೋಜೇ ಗೌಡ ಹೇಳಿದರು.

ಅವರು ನ 26 ರಂದು ಲಾಯಿಲ ಕಾಶಿಬೆಟ್ಟು ಇಲ್ಲಿನ
ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜು ಇದರ ಪ್ರಸ್ತುತ ಸಾಲಿನ ಪದವಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟನಾ ಭಾಷಣದಲ್ಲಿ ಅವರು ಮಾತನಾಡಿದರು.

ಶಿಕ್ಷಣ ಮತ್ತು ಆರೋಗ್ಯ ಇಂದು ಉಳ್ಳವರ ಪಾಲಾಗಿದೆ. ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡ ಶಿಕ್ಷಣ ಪಡೆದು ಉತ್ತಮ ಸಮಾಜ ಕಟ್ಟುವ ಕೈಂಕರ್ಯದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಭೋಜೇ ಗೌಡ ಹೇಳಿದರು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ ಇದರ ಪ್ರಚಾರ್ಯ ಡಾ. ಲೀಲಾಧರ ಡಿ.ವಿ ಮಾತನಾಡಿ, ಶಿಕ್ಷಕರು ಮತ್ತು ವಿದ್ಯಾರ್ಥಿ ಇಬ್ಬರೂ ಹೃದಯ ಬೆಸೆದುಕೊಂಡಲ್ಲಿ ಮಾತ್ರ ಉತ್ತಮ ಶಿಕ್ಷಣದ ವಾತಾವರಣ ನಿರ್ಮಾಣವಾಗಲು ಸಾಧ್ಯ ಎಂದರು. ಆಳ್ವಾಸ್ ನರ್ಸಿಂಗ್ ಕಾಲೇಜು ಪ್ರಾಚಾರ್ಯ ಡಾ. ಯತಿ ಕುಮಾರ ಸ್ವಾಮಿ ಗೌಡ, ಚಿಕ್ಕಮಗಳೂರಿನ ಖ್ಯಾತ ದಂತ ವೈದ್ಯ ಡಾ. ಸುಂದರ ಗೌಡ, ಪ್ರಸನ್ನ ಆಯರ್ವೇದ ಕಾಲೇಜು ನಿವೃತ್ತ ವಿಭಾಗ ಮುಖ್ಯಸ್ಥ ಡಾ. ಶ್ರೀ ಕುಮಾರ್ ಶುಭ ಕೋರಿದರು.

ವೇದಿಕೆಯಲ್ಲಿ ಪ್ರಾಂಶುಪಾಲರುಗಳಾದ ಡಾ. ಫ್ಲೇವಿಯಾ ಕ್ಯಾಸ್ಟಲಿನೋ ಮತ್ತು ಡಾ. ಯತೀಶ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ. ಪ್ರಶಾಂತ ಬಿ.ಕೆ ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರಸನ್ನ ಆಯುರ್ವೇದ ಆಸ್ಪತ್ರೆಯ
ನಿವೃತ್ತ ವಿಭಾಗ ಮುಖ್ಯಸ್ಥ ಡಾ. ಶ್ರೀಕುಮಾರ್ ಮತ್ತು ಡಾ. ಸುಂದರ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಂಕಿತಾ ಪ್ರಾರ್ಥನೆ ಹಾಡಿದರು. ಡಾ. ಈಶ್ವರಚಂದ್ರ ಪ್ರಮಾಣವಚನ ಬೋಧಿಸಿದರು.ಗುರುನಾಥ ಪಾಟೀಲ್ ವಂದಿಸಿದರು. ಡಾ. ಮಹೇಶ್ ಪ್ರಸನ್ನ , ಡಾ. ವೃಂದಾ ಬೆಡೇಕರ್ ಮತ್ತು ಡಾ. ಶೃತಿ ಕಾರ್ಯಕ್ರಮ ನಿರೂಪಿಸಿದರು.


ಯಶಸ್ಸಿನ ಶಿಖರವೇರಲು ಪರಿಶ್ರಮ ಮುಖ್ಯ :ಗಂಗಾಧರ ಗೌಡ

ಅಧ್ಯಕ್ಷತೆ ವಹಿಸಿದ್ದ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆಯುರ್ವೇದ ಮತ್ತು ನರ್ಸಿಂಗ್ ಕಾಲೇಜು ಆರಂಭಿಸಲು ನಾವು ಅನೇಕ ಸವಾಲುಗಳನ್ನು ಎದುರಿಸಿದ್ದೆವು. ಇಂದು ಎಲ್ಲಾ ಮೂಲಭೂತ ಸೌಲಭ್ಯಗಳೊಂದಿಗೆ ನಾವು ಈ ಮಟ್ಟಕ್ಕೆ ಬೆಳೆದಿದ್ದೇವೆ. ಯಶಸ್ಸು ಸಾಧಿಸಲು ಎಲ್ಲರೂ ಸೇರಿ ಯುದ್ದ ಗೆಲ್ಲಬೇಕಿದೆ ಎಂದರು.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya
error: Content is protected !!