25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

ಬಳ್ಳಮಂಜ: ತುಳುನಾಡಿನ ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಬಳ್ಳಮಂಜ. ಈ ಕ್ಷೇತ್ರದ ಸೊಬಗಿಗೆ ತಕ್ಕಂತೆ ಇಲ್ಲಿ ಶ್ರೀ ಅನಂತೇಶ್ವರ ದೇವರ ದಿವ್ಯ ಸನ್ನಿಧಿ ಇದ್ದು, ಭಕ್ತ ಜನರ ಇಷ್ಟಾರ್ಥವನ್ನು ಈಡೇರಿಸುವ ಶ್ರದ್ದಾ ಕೇಂದ್ರವಾಗಿರುತ್ತದೆ. ತುಳುನಾಡಿನ ಇತಿಹಾಸದ ಪ್ರಕಾರ ಬಳ್ಳಮಂಜ ಎಂದರೆ ಬೆಳ್ಳಿಯ ಹುತ್ತ ಎಂದು ವ್ಯಾಖ್ಯಾನಿಸುತ್ತಾರೆ. ವರ್ಷಂಪ್ರತಿಯಂತೆ ಜರಗುವ ಷಷ್ಠಿ ಮಹೋತ್ಸವ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತಾದಿಗಳ ಸೇರುವಿಕೆಯಿಂದ ಕಣ್ಮಣ ಸೆಳೆದ ಬ್ರಹ್ಮರಥೋತ್ಸವ ನಡೆಯಿತು.

ನ. 26ರಂದು ಬೆಳಿಗ್ಗೆ 7ರಿಂದ ಷಷ್ಠಿ ಉತ್ಸವ ಪ್ರಾರಂಭಗೊಂಡು ಗಂಟೆ 11ಕ್ಕೆ ಬ್ರಹ್ಮರಥೋತ್ಸವ ನಡೆಯಿತು. ಅಪರಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಡಾ. ಎಂ. ಹರ್ಷ ಸಂಪಿಗೆತ್ತಾಯ, ಶಾಸಕ ಹರೀಶ್ ಪೂಂಜಾ, ಶಿವಪ್ರಸಾದ್ ತಂತ್ರಿ,ಅರ್ಚಕ ವೃಂದ, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

ರಾತ್ರಿ 7ಕ್ಕೆ ಕಟ್ಟೆ ಪೂಜೆ, ದರ್ಶನ ಬಲಿ ನಡೆಯಲಿದೆ.

Related posts

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!