22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

ಉಜಿರೆ: ಕಾಲೇಜಿನ ವಾಣಿಜ್ಯ ವಿಭಾಗದ ಅನುಖ-2025 ಸಂಭ್ರಮಾಚರಣೆಯು ನ.24ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕರಾದ ವಂ.ಫಾ.ಅಬೆಲ್ ಲೋಬೋ,ಟ್ರೋಫಿಗಳ ಅನಾವರಣಗೊಳಿಸಿ ಚಾಲನೆ ನೀಡಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.


ಮುಖ್ಯ ಅಥಿತಿಗಳಾಗಿ ವಾಮದಪದವು ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಡಾ.ವಿಶಾಲ್ ಪಿಂಟೋ ಮಾತನಾಡಿ ಶಿಕ್ಷಣದಲ್ಲಿ ಮೌಲ್ಯಧಾರಿತ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತದೆ. ವಿದ್ಯಾರ್ಥಿ ಭವಿಷ್ಯ ರೂಪಿಸುತ್ತದೆ. ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಮಹತ್ವವನ್ನು ನೀಡಬೇಕು ಎಂದು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ. ವಿಜಯ್ ಲೋಬೋ ಮಾತನಾಡಿ ವಾಣಿಜ್ಯ ವಿಭಾಗದ ಅನುಖ -೨ಏ೨೫ ರ ಮಹತ್ವವನ್ನು ತಿಳಿಸಿದರು.ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ನಿರ್ದೆಶಕರಾದ ಶ್ರೀಮತಿ ಕಾವ್ಯಶ್ರೀ ,ಅನುಗ್ರಹ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಶ್ರೀಮತಿ ಐರಿನ್ ರೋಡ್ರಿಗಸ್, ಶ್ರೀಮತಿ ವಿನಯಲತಾ ಹಾಗೂ ವಾಣಿಜ್ಯ ಸಂಘದ ಕಾರ್ಯದರ್ಶಿ ಮಾರ್ಕ್, ರಿ಼ಷಾನ್ ಹಾಗೂ ಅನುಖ- ೨ಏ೨೫ರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಯುಕ್ತ ಅನುಗ್ರಹ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿನೆಸ್ ಕ್ವಿಜ್,ಕೊಲೇಜ್ ಸ್ಪರ್ಧೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಬೆಸ್ಟ್ ಟೀಮ್ ಮ್ಯಾನೆಜ್‌ಮೆಂಟ್ ,ವ್ಯಾಪಾರೋದ್ಯಮ,ಬಿಸಿನೆಸ್‌ಕ್ವಿಜ್, ವ್ಯಾವಹಾರಿಕ ಮಾದರಿ ತಯಾರಿಕೆ ಸ್ಪರ್ಧೆ ಏರ್ಪಡಿಸಿ ಬಹುಮಾನವನ್ನು ನೀಡಲಾಯಿತು.ಇದೇ ಸಂದರ್ಭದಲ್ಲಿ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವಾಣಿಜ್ಯ ಉಪನ್ಯಾಸಕಿ ಶ್ರೀಮತಿ ಕಾವ್ಯಶ್ರೀ ಸ್ವಾಗತಿಸಿ, ವಿದ್ಯಾರ್ಥಿ ನಾಯಕಿ ಹೆಝಲ್ ಜಿಶಾ ಪಿಂಟೋ ನಿರೂಪಿಸಿ, ಹಲೀಮಾ ನಜ್ಮೀನ್ ಧನ್ಯವಾದವಿತ್ತರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!