23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

ಬಳ್ಳಮಂಜ: ತುಳುನಾಡಿನ ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಬಳ್ಳಮಂಜ. ಈ ಕ್ಷೇತ್ರದ ಸೊಬಗಿಗೆ ತಕ್ಕಂತೆ ಇಲ್ಲಿ ಶ್ರೀ ಅನಂತೇಶ್ವರ ದೇವರ ದಿವ್ಯ ಸನ್ನಿಧಿ ಇದ್ದು, ಭಕ್ತ ಜನರ ಇಷ್ಟಾರ್ಥವನ್ನು ಈಡೇರಿಸುವ ಶ್ರದ್ದಾ ಕೇಂದ್ರವಾಗಿರುತ್ತದೆ. ತುಳುನಾಡಿನ ಇತಿಹಾಸದ ಪ್ರಕಾರ ಬಳ್ಳಮಂಜ ಎಂದರೆ ಬೆಳ್ಳಿಯ ಹುತ್ತ ಎಂದು ವ್ಯಾಖ್ಯಾನಿಸುತ್ತಾರೆ. ವರ್ಷಂಪ್ರತಿಯಂತೆ ಜರಗುವ ಷಷ್ಠಿ ಮಹೋತ್ಸವ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತಾದಿಗಳ ಸೇರುವಿಕೆಯಿಂದ ಕಣ್ಮಣ ಸೆಳೆದ ಬ್ರಹ್ಮರಥೋತ್ಸವ ನಡೆಯಿತು.

ನ. 26ರಂದು ಬೆಳಿಗ್ಗೆ 7ರಿಂದ ಷಷ್ಠಿ ಉತ್ಸವ ಪ್ರಾರಂಭಗೊಂಡು ಗಂಟೆ 11ಕ್ಕೆ ಬ್ರಹ್ಮರಥೋತ್ಸವ ನಡೆಯಿತು. ಅಪರಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಡಾ. ಎಂ. ಹರ್ಷ ಸಂಪಿಗೆತ್ತಾಯ, ಶಾಸಕ ಹರೀಶ್ ಪೂಂಜಾ, ಶಿವಪ್ರಸಾದ್ ತಂತ್ರಿ,ಅರ್ಚಕ ವೃಂದ, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

ರಾತ್ರಿ 7ಕ್ಕೆ ಕಟ್ಟೆ ಪೂಜೆ, ದರ್ಶನ ಬಲಿ ನಡೆಯಲಿದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya
error: Content is protected !!