25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

ಬಳ್ಳಮಂಜ: ತುಳುನಾಡಿನ ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಬಳ್ಳಮಂಜ. ಈ ಕ್ಷೇತ್ರದ ಸೊಬಗಿಗೆ ತಕ್ಕಂತೆ ಇಲ್ಲಿ ಶ್ರೀ ಅನಂತೇಶ್ವರ ದೇವರ ದಿವ್ಯ ಸನ್ನಿಧಿ ಇದ್ದು, ಭಕ್ತ ಜನರ ಇಷ್ಟಾರ್ಥವನ್ನು ಈಡೇರಿಸುವ ಶ್ರದ್ದಾ ಕೇಂದ್ರವಾಗಿರುತ್ತದೆ. ತುಳುನಾಡಿನ ಇತಿಹಾಸದ ಪ್ರಕಾರ ಬಳ್ಳಮಂಜ ಎಂದರೆ ಬೆಳ್ಳಿಯ ಹುತ್ತ ಎಂದು ವ್ಯಾಖ್ಯಾನಿಸುತ್ತಾರೆ. ವರ್ಷಂಪ್ರತಿಯಂತೆ ಜರಗುವ ಷಷ್ಠಿ ಮಹೋತ್ಸವ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತಾದಿಗಳ ಸೇರುವಿಕೆಯಿಂದ ಕಣ್ಮಣ ಸೆಳೆದ ಬ್ರಹ್ಮರಥೋತ್ಸವ ನಡೆಯಿತು.

ನ. 26ರಂದು ಬೆಳಿಗ್ಗೆ 7ರಿಂದ ಷಷ್ಠಿ ಉತ್ಸವ ಪ್ರಾರಂಭಗೊಂಡು ಗಂಟೆ 11ಕ್ಕೆ ಬ್ರಹ್ಮರಥೋತ್ಸವ ನಡೆಯಿತು. ಅಪರಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಡಾ. ಎಂ. ಹರ್ಷ ಸಂಪಿಗೆತ್ತಾಯ, ಶಾಸಕ ಹರೀಶ್ ಪೂಂಜಾ, ಶಿವಪ್ರಸಾದ್ ತಂತ್ರಿ,ಅರ್ಚಕ ವೃಂದ, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

ರಾತ್ರಿ 7ಕ್ಕೆ ಕಟ್ಟೆ ಪೂಜೆ, ದರ್ಶನ ಬಲಿ ನಡೆಯಲಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya
error: Content is protected !!