July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

ಬಳ್ಳಮಂಜ: ತುಳುನಾಡಿನ ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಬಳ್ಳಮಂಜ. ಈ ಕ್ಷೇತ್ರದ ಸೊಬಗಿಗೆ ತಕ್ಕಂತೆ ಇಲ್ಲಿ ಶ್ರೀ ಅನಂತೇಶ್ವರ ದೇವರ ದಿವ್ಯ ಸನ್ನಿಧಿ ಇದ್ದು, ಭಕ್ತ ಜನರ ಇಷ್ಟಾರ್ಥವನ್ನು ಈಡೇರಿಸುವ ಶ್ರದ್ದಾ ಕೇಂದ್ರವಾಗಿರುತ್ತದೆ. ತುಳುನಾಡಿನ ಇತಿಹಾಸದ ಪ್ರಕಾರ ಬಳ್ಳಮಂಜ ಎಂದರೆ ಬೆಳ್ಳಿಯ ಹುತ್ತ ಎಂದು ವ್ಯಾಖ್ಯಾನಿಸುತ್ತಾರೆ. ವರ್ಷಂಪ್ರತಿಯಂತೆ ಜರಗುವ ಷಷ್ಠಿ ಮಹೋತ್ಸವ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತಾದಿಗಳ ಸೇರುವಿಕೆಯಿಂದ ಕಣ್ಮಣ ಸೆಳೆದ ಬ್ರಹ್ಮರಥೋತ್ಸವ ನಡೆಯಿತು.

ನ. 26ರಂದು ಬೆಳಿಗ್ಗೆ 7ರಿಂದ ಷಷ್ಠಿ ಉತ್ಸವ ಪ್ರಾರಂಭಗೊಂಡು ಗಂಟೆ 11ಕ್ಕೆ ಬ್ರಹ್ಮರಥೋತ್ಸವ ನಡೆಯಿತು. ಅಪರಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಡಾ. ಎಂ. ಹರ್ಷ ಸಂಪಿಗೆತ್ತಾಯ, ಶಾಸಕ ಹರೀಶ್ ಪೂಂಜಾ, ಶಿವಪ್ರಸಾದ್ ತಂತ್ರಿ,ಅರ್ಚಕ ವೃಂದ, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

ರಾತ್ರಿ 7ಕ್ಕೆ ಕಟ್ಟೆ ಪೂಜೆ, ದರ್ಶನ ಬಲಿ ನಡೆಯಲಿದೆ.

Related posts

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya

ಶಾಸಕ ಹರೀಶ್ ಪೂಂಜಾರ ಮುತುವರ್ಜಿಯಿಂದ ಇಲಂತಿಲ ಪಿದಮಲೆಯಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ತಾತ್ಕಾಲಿಕ ಮುಕ್ತಿ

Suddi Udaya
error: Content is protected !!