23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಕ್ತಾದಿಗಳ ಉಪಯೋಗಕ್ಕಾಗಿ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರಗಳನ್ನು ಕೊಡುಗೆಯಾಗಿ ನ.25ರಂದು ನೀಡಲಾಯಿತು.


ಎಲ್ ಐ ಸಿ ದಕ್ಷಿಣ ಮಧ್ಯ ವಿಭಾಗದ ಜೋನಲ್ ಮ್ಯಾನೇಜರ್ ಹಾಗೂ ಇ ಡಿ ಪುನೀತ್ ಕುಮಾರ್ ಕೊಡುಗೆಯನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರಿಗೆ ಹಸ್ತಾಂತರಿಸಿದರು.


ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಎಲ್ ಐ ಸಿ ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಗಣಪತಿ ಎನ್ ಭಟ್, ಮಾರುಕಟ್ಟೆ ಪ್ರಬಂಧಕ ಬಿಜು ಜೋಸೆಫ್, ಮಾರಾಟ ಅಧಿಕಾರಿ ದುರ್ಗಾರಾಮ್ ಶೆಣೈ, ಬೆಳ್ತಂಗಡಿ ಸಂಪರ್ಕ ಶಾಖಾಧಿಕಾರಿ ಪ್ರಕಾಶ್ ಕುಮಾರ್, ಉಡುಪಿ ವಿಭಾಗದ ಶ್ಯಾಮ್ ಸುಂದರ್, ಅಭಿವೃದ್ಧಿ ಅಧಿಕಾರಿ ಉದಯಶಂಕರ್, ಅರ್ಚಕರು ಸುಬ್ರಹ್ಮಣ್ಯ ಉಪ್ಪಾರ್ಣ ಉಪಸ್ಥಿತರಿದ್ದರು.
ದೇವಳದ ವತಿಯಿಂದ ಪುನೀತ್ ಕುಮಾರ್ ಹಾಗೂ ಗಣಪತಿ ಎನ್ ಭಟ್ಟರನ್ನು ಗೌರವಿಸಲಾಯಿತು. ಸುಬ್ರಹ್ಮಣ್ಯ ಶಬರಾಯರು ದೇವಳದ ಪರವಾಗಿ ಕೃತಜ್ಞತೆ ಸಲ್ಲಿಸಿದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya
error: Content is protected !!