September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಕ್ತಾದಿಗಳ ಉಪಯೋಗಕ್ಕಾಗಿ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರಗಳನ್ನು ಕೊಡುಗೆಯಾಗಿ ನ.25ರಂದು ನೀಡಲಾಯಿತು.


ಎಲ್ ಐ ಸಿ ದಕ್ಷಿಣ ಮಧ್ಯ ವಿಭಾಗದ ಜೋನಲ್ ಮ್ಯಾನೇಜರ್ ಹಾಗೂ ಇ ಡಿ ಪುನೀತ್ ಕುಮಾರ್ ಕೊಡುಗೆಯನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರಿಗೆ ಹಸ್ತಾಂತರಿಸಿದರು.


ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಎಲ್ ಐ ಸಿ ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಗಣಪತಿ ಎನ್ ಭಟ್, ಮಾರುಕಟ್ಟೆ ಪ್ರಬಂಧಕ ಬಿಜು ಜೋಸೆಫ್, ಮಾರಾಟ ಅಧಿಕಾರಿ ದುರ್ಗಾರಾಮ್ ಶೆಣೈ, ಬೆಳ್ತಂಗಡಿ ಸಂಪರ್ಕ ಶಾಖಾಧಿಕಾರಿ ಪ್ರಕಾಶ್ ಕುಮಾರ್, ಉಡುಪಿ ವಿಭಾಗದ ಶ್ಯಾಮ್ ಸುಂದರ್, ಅಭಿವೃದ್ಧಿ ಅಧಿಕಾರಿ ಉದಯಶಂಕರ್, ಅರ್ಚಕರು ಸುಬ್ರಹ್ಮಣ್ಯ ಉಪ್ಪಾರ್ಣ ಉಪಸ್ಥಿತರಿದ್ದರು.
ದೇವಳದ ವತಿಯಿಂದ ಪುನೀತ್ ಕುಮಾರ್ ಹಾಗೂ ಗಣಪತಿ ಎನ್ ಭಟ್ಟರನ್ನು ಗೌರವಿಸಲಾಯಿತು. ಸುಬ್ರಹ್ಮಣ್ಯ ಶಬರಾಯರು ದೇವಳದ ಪರವಾಗಿ ಕೃತಜ್ಞತೆ ಸಲ್ಲಿಸಿದರು.

Related posts

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಬದನಾಜೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಲಯನ್ಸ್ ಬೆಳ್ತಂಗಡಿ ವತಿಯಿಂದ “ಡ್ರಗ್ಸ್ ಮುಕ್ತ ಬೆಳ್ತಂಗಡಿ” ಅಭಿಯಾನದ ಕರಪತ್ರ ಅನಾವರಣ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya
error: Content is protected !!