25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಕ್ತಾದಿಗಳ ಉಪಯೋಗಕ್ಕಾಗಿ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರಗಳನ್ನು ಕೊಡುಗೆಯಾಗಿ ನ.25ರಂದು ನೀಡಲಾಯಿತು.


ಎಲ್ ಐ ಸಿ ದಕ್ಷಿಣ ಮಧ್ಯ ವಿಭಾಗದ ಜೋನಲ್ ಮ್ಯಾನೇಜರ್ ಹಾಗೂ ಇ ಡಿ ಪುನೀತ್ ಕುಮಾರ್ ಕೊಡುಗೆಯನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರಿಗೆ ಹಸ್ತಾಂತರಿಸಿದರು.


ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಎಲ್ ಐ ಸಿ ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಗಣಪತಿ ಎನ್ ಭಟ್, ಮಾರುಕಟ್ಟೆ ಪ್ರಬಂಧಕ ಬಿಜು ಜೋಸೆಫ್, ಮಾರಾಟ ಅಧಿಕಾರಿ ದುರ್ಗಾರಾಮ್ ಶೆಣೈ, ಬೆಳ್ತಂಗಡಿ ಸಂಪರ್ಕ ಶಾಖಾಧಿಕಾರಿ ಪ್ರಕಾಶ್ ಕುಮಾರ್, ಉಡುಪಿ ವಿಭಾಗದ ಶ್ಯಾಮ್ ಸುಂದರ್, ಅಭಿವೃದ್ಧಿ ಅಧಿಕಾರಿ ಉದಯಶಂಕರ್, ಅರ್ಚಕರು ಸುಬ್ರಹ್ಮಣ್ಯ ಉಪ್ಪಾರ್ಣ ಉಪಸ್ಥಿತರಿದ್ದರು.
ದೇವಳದ ವತಿಯಿಂದ ಪುನೀತ್ ಕುಮಾರ್ ಹಾಗೂ ಗಣಪತಿ ಎನ್ ಭಟ್ಟರನ್ನು ಗೌರವಿಸಲಾಯಿತು. ಸುಬ್ರಹ್ಮಣ್ಯ ಶಬರಾಯರು ದೇವಳದ ಪರವಾಗಿ ಕೃತಜ್ಞತೆ ಸಲ್ಲಿಸಿದರು.

Related posts

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya
error: Content is protected !!