25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

ಉಜಿರೆ: ಕಾಲೇಜಿನ ವಾಣಿಜ್ಯ ವಿಭಾಗದ ಅನುಖ-2025 ಸಂಭ್ರಮಾಚರಣೆಯು ನ.24ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕರಾದ ವಂ.ಫಾ.ಅಬೆಲ್ ಲೋಬೋ,ಟ್ರೋಫಿಗಳ ಅನಾವರಣಗೊಳಿಸಿ ಚಾಲನೆ ನೀಡಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.


ಮುಖ್ಯ ಅಥಿತಿಗಳಾಗಿ ವಾಮದಪದವು ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಡಾ.ವಿಶಾಲ್ ಪಿಂಟೋ ಮಾತನಾಡಿ ಶಿಕ್ಷಣದಲ್ಲಿ ಮೌಲ್ಯಧಾರಿತ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತದೆ. ವಿದ್ಯಾರ್ಥಿ ಭವಿಷ್ಯ ರೂಪಿಸುತ್ತದೆ. ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಮಹತ್ವವನ್ನು ನೀಡಬೇಕು ಎಂದು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ. ವಿಜಯ್ ಲೋಬೋ ಮಾತನಾಡಿ ವಾಣಿಜ್ಯ ವಿಭಾಗದ ಅನುಖ -೨ಏ೨೫ ರ ಮಹತ್ವವನ್ನು ತಿಳಿಸಿದರು.ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ನಿರ್ದೆಶಕರಾದ ಶ್ರೀಮತಿ ಕಾವ್ಯಶ್ರೀ ,ಅನುಗ್ರಹ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಶ್ರೀಮತಿ ಐರಿನ್ ರೋಡ್ರಿಗಸ್, ಶ್ರೀಮತಿ ವಿನಯಲತಾ ಹಾಗೂ ವಾಣಿಜ್ಯ ಸಂಘದ ಕಾರ್ಯದರ್ಶಿ ಮಾರ್ಕ್, ರಿ಼ಷಾನ್ ಹಾಗೂ ಅನುಖ- ೨ಏ೨೫ರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಯುಕ್ತ ಅನುಗ್ರಹ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿನೆಸ್ ಕ್ವಿಜ್,ಕೊಲೇಜ್ ಸ್ಪರ್ಧೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಬೆಸ್ಟ್ ಟೀಮ್ ಮ್ಯಾನೆಜ್‌ಮೆಂಟ್ ,ವ್ಯಾಪಾರೋದ್ಯಮ,ಬಿಸಿನೆಸ್‌ಕ್ವಿಜ್, ವ್ಯಾವಹಾರಿಕ ಮಾದರಿ ತಯಾರಿಕೆ ಸ್ಪರ್ಧೆ ಏರ್ಪಡಿಸಿ ಬಹುಮಾನವನ್ನು ನೀಡಲಾಯಿತು.ಇದೇ ಸಂದರ್ಭದಲ್ಲಿ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವಾಣಿಜ್ಯ ಉಪನ್ಯಾಸಕಿ ಶ್ರೀಮತಿ ಕಾವ್ಯಶ್ರೀ ಸ್ವಾಗತಿಸಿ, ವಿದ್ಯಾರ್ಥಿ ನಾಯಕಿ ಹೆಝಲ್ ಜಿಶಾ ಪಿಂಟೋ ನಿರೂಪಿಸಿ, ಹಲೀಮಾ ನಜ್ಮೀನ್ ಧನ್ಯವಾದವಿತ್ತರು.

Related posts

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!