23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಪರಮಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಗೆ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಧಳೀಯ ಸಂಸ್ಥೆಯ ವತಿಯಿಂದ ಹುಟ್ಟು ಹಬ್ಬದ ಶುಭಾಶಯವನ್ನು ಕೋರಲಾಯಿತು.

ಈ ಸಂದರ್ಭದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಎಂಬುದು ಒಂದು ದೊಡ್ಡ ಅಂತರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆ ಯಾವುದೇ ಕಾರಣಕ್ಕೂ ಇದನ್ನು ಬಿಡದೆ ಸಾಧನೆ ಮಾಡಿ ನಿಮ್ಮ ವ್ಯಕ್ತಿತ್ವವನ್ನು ಉನ್ನತವಾಗಿ ರೂಪಿಸಿಕೊಳ್ಳಿ. ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಡಾ ಎಂ.ಮೋಹನ್ ಆಳ್ವರ ಸಾಧನೆ ಮಹತ್ವದ್ದು, ಪಿಲಿಕುಲದಲ್ಲಿ ಅವರು ನಿರ್ಮಿಸುತ್ತಿರುವ ಸ್ಕೌಟ್ ಗೈಡ್ ತರಬೇತಿ ಕೇಂದ್ರವನ್ನು ನೋಡಿ ನನಗೆ ತುಂಬಾ ಅಚ್ಚರಿಯಾಗುತ್ತದೆ. ಅವರ ಕೆಲಸ ಸರ್ವರಿಗೂ ಅನುಕರಣೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಉಪಸ್ಥಿತರಿದ್ದ ರೋವರ್ ವಿದ್ಯಾರ್ಥಿಗಳಿಗೆ ಜೀವನದುದ್ದಕ್ಕೂ ಸ್ಕೌಟ್ ನಲ್ಲಿ ಮುಂದುವರೆಯುವಂತೆ ಹುರಿದುಂಬಿಸಿ ಶುಭ ಹಾರೈಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪ್ರಮೀಳಾ ಪೂಜಾರಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಉಜಿರೆಯ ರೋವರ್ ಸ್ಕೌಟ್ ಲೀಡರ್ ಲಕ್ಷ್ಮೀಶ ಪಿ ಭಟ್ ಹಾಗೂ ರೋವರ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya
error: Content is protected !!