25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

ಬಳ್ಳಮಂಜ: ತುಳುನಾಡಿನ ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಬಳ್ಳಮಂಜ. ಈ ಕ್ಷೇತ್ರದ ಸೊಬಗಿಗೆ ತಕ್ಕಂತೆ ಇಲ್ಲಿ ಶ್ರೀ ಅನಂತೇಶ್ವರ ದೇವರ ದಿವ್ಯ ಸನ್ನಿಧಿ ಇದ್ದು, ಭಕ್ತ ಜನರ ಇಷ್ಟಾರ್ಥವನ್ನು ಈಡೇರಿಸುವ ಶ್ರದ್ದಾ ಕೇಂದ್ರವಾಗಿರುತ್ತದೆ. ತುಳುನಾಡಿನ ಇತಿಹಾಸದ ಪ್ರಕಾರ ಬಳ್ಳಮಂಜ ಎಂದರೆ ಬೆಳ್ಳಿಯ ಹುತ್ತ ಎಂದು ವ್ಯಾಖ್ಯಾನಿಸುತ್ತಾರೆ. ವರ್ಷಂಪ್ರತಿಯಂತೆ ಜರಗುವ ಷಷ್ಠಿ ಮಹೋತ್ಸವ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತಾದಿಗಳ ಸೇರುವಿಕೆಯಿಂದ ಕಣ್ಮಣ ಸೆಳೆದ ಬ್ರಹ್ಮರಥೋತ್ಸವ ನಡೆಯಿತು.

ನ. 26ರಂದು ಬೆಳಿಗ್ಗೆ 7ರಿಂದ ಷಷ್ಠಿ ಉತ್ಸವ ಪ್ರಾರಂಭಗೊಂಡು ಗಂಟೆ 11ಕ್ಕೆ ಬ್ರಹ್ಮರಥೋತ್ಸವ ನಡೆಯಿತು. ಅಪರಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಡಾ. ಎಂ. ಹರ್ಷ ಸಂಪಿಗೆತ್ತಾಯ, ಶಾಸಕ ಹರೀಶ್ ಪೂಂಜಾ, ಶಿವಪ್ರಸಾದ್ ತಂತ್ರಿ,ಅರ್ಚಕ ವೃಂದ, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

ರಾತ್ರಿ 7ಕ್ಕೆ ಕಟ್ಟೆ ಪೂಜೆ, ದರ್ಶನ ಬಲಿ ನಡೆಯಲಿದೆ.

Related posts

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

Suddi Udaya

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya
error: Content is protected !!