ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

ಬಳ್ಳಮಂಜ: ತುಳುನಾಡಿನ ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಬಳ್ಳಮಂಜ. ಈ ಕ್ಷೇತ್ರದ ಸೊಬಗಿಗೆ ತಕ್ಕಂತೆ ಇಲ್ಲಿ ಶ್ರೀ ಅನಂತೇಶ್ವರ ದೇವರ ದಿವ್ಯ ಸನ್ನಿಧಿ ಇದ್ದು, ಭಕ್ತ ಜನರ ಇಷ್ಟಾರ್ಥವನ್ನು ಈಡೇರಿಸುವ ಶ್ರದ್ದಾ ಕೇಂದ್ರವಾಗಿರುತ್ತದೆ. ತುಳುನಾಡಿನ ಇತಿಹಾಸದ ಪ್ರಕಾರ ಬಳ್ಳಮಂಜ ಎಂದರೆ ಬೆಳ್ಳಿಯ ಹುತ್ತ ಎಂದು ವ್ಯಾಖ್ಯಾನಿಸುತ್ತಾರೆ. ವರ್ಷಂಪ್ರತಿಯಂತೆ ಜರಗುವ ಷಷ್ಠಿ ಮಹೋತ್ಸವ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತಾದಿಗಳ ಸೇರುವಿಕೆಯಿಂದ ಕಣ್ಮಣ ಸೆಳೆದ ಬ್ರಹ್ಮರಥೋತ್ಸವ ನಡೆಯಿತು.

ನ. 26ರಂದು ಬೆಳಿಗ್ಗೆ 7ರಿಂದ ಷಷ್ಠಿ ಉತ್ಸವ ಪ್ರಾರಂಭಗೊಂಡು ಗಂಟೆ 11ಕ್ಕೆ ಬ್ರಹ್ಮರಥೋತ್ಸವ ನಡೆಯಿತು. ಅಪರಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಡಾ. ಎಂ. ಹರ್ಷ ಸಂಪಿಗೆತ್ತಾಯ, ಶಾಸಕ ಹರೀಶ್ ಪೂಂಜಾ, ಶಿವಪ್ರಸಾದ್ ತಂತ್ರಿ,ಅರ್ಚಕ ವೃಂದ, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

ರಾತ್ರಿ 7ಕ್ಕೆ ಕಟ್ಟೆ ಪೂಜೆ, ದರ್ಶನ ಬಲಿ ನಡೆಯಲಿದೆ.

Related posts

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ ಹಾಗೂ ವಿವಾಹ ಕಾರ್ಯಕ್ರಮ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!