September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಕ್ತಾದಿಗಳ ಉಪಯೋಗಕ್ಕಾಗಿ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರಗಳನ್ನು ಕೊಡುಗೆಯಾಗಿ ನ.25ರಂದು ನೀಡಲಾಯಿತು.


ಎಲ್ ಐ ಸಿ ದಕ್ಷಿಣ ಮಧ್ಯ ವಿಭಾಗದ ಜೋನಲ್ ಮ್ಯಾನೇಜರ್ ಹಾಗೂ ಇ ಡಿ ಪುನೀತ್ ಕುಮಾರ್ ಕೊಡುಗೆಯನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರಿಗೆ ಹಸ್ತಾಂತರಿಸಿದರು.


ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಎಲ್ ಐ ಸಿ ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಗಣಪತಿ ಎನ್ ಭಟ್, ಮಾರುಕಟ್ಟೆ ಪ್ರಬಂಧಕ ಬಿಜು ಜೋಸೆಫ್, ಮಾರಾಟ ಅಧಿಕಾರಿ ದುರ್ಗಾರಾಮ್ ಶೆಣೈ, ಬೆಳ್ತಂಗಡಿ ಸಂಪರ್ಕ ಶಾಖಾಧಿಕಾರಿ ಪ್ರಕಾಶ್ ಕುಮಾರ್, ಉಡುಪಿ ವಿಭಾಗದ ಶ್ಯಾಮ್ ಸುಂದರ್, ಅಭಿವೃದ್ಧಿ ಅಧಿಕಾರಿ ಉದಯಶಂಕರ್, ಅರ್ಚಕರು ಸುಬ್ರಹ್ಮಣ್ಯ ಉಪ್ಪಾರ್ಣ ಉಪಸ್ಥಿತರಿದ್ದರು.
ದೇವಳದ ವತಿಯಿಂದ ಪುನೀತ್ ಕುಮಾರ್ ಹಾಗೂ ಗಣಪತಿ ಎನ್ ಭಟ್ಟರನ್ನು ಗೌರವಿಸಲಾಯಿತು. ಸುಬ್ರಹ್ಮಣ್ಯ ಶಬರಾಯರು ದೇವಳದ ಪರವಾಗಿ ಕೃತಜ್ಞತೆ ಸಲ್ಲಿಸಿದರು.

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಕರಾಯ ಮಸೀದಿ ಬಳಿ ಮೋರಿ ಕುಸಿತ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!