ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಉಜಿರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ ” ಪ್ರಪಂಚದಲ್ಲಿಯೇ ಅತೀ ದೊಡ್ಡ ಹಾಗೂ ಸಮಗ್ರವಾದ ಸಂವಿಧಾನ ಹೊಂದಿರುವುದು ನಮ್ಮ ದೇಶದ ಹೆಮ್ಮೆ. ಸಂವಿಧಾನದಲ್ಲಿರುವ ಹಕ್ಕು ಕರ್ತವ್ಯಗಳು ಪ್ರತಿಯೊಬ್ಬ ನಾಗರಿಕರು ನಿರ್ಭಿತಿಯಿಂದ ಜೀವಿಸಲು ಸಾಧ್ಯವಾಗಿಸಿದೆ” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಸಹಾಯಕ ಪ್ರಧ್ಯಾಪಕರು ಹಾಗೂ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಟರಾಜ್ ಹೆಚ್ ಕೆ ಇವರು ಮಾತನಾಡಿ “ನಮ್ಮ ದೇಶದ ಸಂವಿಧಾನ ನಮ್ಮೆಲ್ಲರಿಗೂ ನೆಮ್ಮದಿಯಿಂದ ಬದುಕುವ ಅವಕಾಶ ಮಾಡಿಕೊಟ್ಟಿದೆ. ವಿವಿಧ ಜಾತಿ ಧರ್ಮ ಪ್ರಾದೇಶಿಕ ಭಿನ್ನತೆ ಎಲ್ಲವನ್ನು ಗಮನಿಸಿ ಸಮಾನತೆಯಿಂದ ಬದುಕುವ ಹಕ್ಕನ್ನು ನಮಗೆ ನೀಡಿದೆ. ಇದು ನಮ್ಮ ಸಂವಿಧಾನದ ವಿಶೇಷತೆ” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರು ಸ್ವಯಂ ಸೇವಕರಿಗೆ ಸಂವಿಧಾನ ದಿನದ ಪ್ರತಿಜ್ಞಾ ವಿಧಿ ಭೋದಿಸಿದರು.
ವೇದಿಕೆಯಲ್ಲಿ ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ ಉಪಸ್ಥಿತರಿದ್ದರು.
ಸ್ವಯಂ ಸೇವಕ ಕಾರ್ತಿಕ್ ಸ್ವಾಗತಿಸಿ ವಂದಿಸಿದರು. ಸ್ವಯಂ ಸೇವಕಿ ಧನ್ಯ ನಿರೂಪಿಸಿದರು.

Related posts

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ ಎರ್ನೋಡಿ ಶ್ರೀ ಕ್ಷೇತ್ರ ನಾಗಬನದಲ್ಲಿ ನಾಗರ ಪಂಚಮಿ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ ಮಂ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!