July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಉಜಿರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ ” ಪ್ರಪಂಚದಲ್ಲಿಯೇ ಅತೀ ದೊಡ್ಡ ಹಾಗೂ ಸಮಗ್ರವಾದ ಸಂವಿಧಾನ ಹೊಂದಿರುವುದು ನಮ್ಮ ದೇಶದ ಹೆಮ್ಮೆ. ಸಂವಿಧಾನದಲ್ಲಿರುವ ಹಕ್ಕು ಕರ್ತವ್ಯಗಳು ಪ್ರತಿಯೊಬ್ಬ ನಾಗರಿಕರು ನಿರ್ಭಿತಿಯಿಂದ ಜೀವಿಸಲು ಸಾಧ್ಯವಾಗಿಸಿದೆ” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಸಹಾಯಕ ಪ್ರಧ್ಯಾಪಕರು ಹಾಗೂ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಟರಾಜ್ ಹೆಚ್ ಕೆ ಇವರು ಮಾತನಾಡಿ “ನಮ್ಮ ದೇಶದ ಸಂವಿಧಾನ ನಮ್ಮೆಲ್ಲರಿಗೂ ನೆಮ್ಮದಿಯಿಂದ ಬದುಕುವ ಅವಕಾಶ ಮಾಡಿಕೊಟ್ಟಿದೆ. ವಿವಿಧ ಜಾತಿ ಧರ್ಮ ಪ್ರಾದೇಶಿಕ ಭಿನ್ನತೆ ಎಲ್ಲವನ್ನು ಗಮನಿಸಿ ಸಮಾನತೆಯಿಂದ ಬದುಕುವ ಹಕ್ಕನ್ನು ನಮಗೆ ನೀಡಿದೆ. ಇದು ನಮ್ಮ ಸಂವಿಧಾನದ ವಿಶೇಷತೆ” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರು ಸ್ವಯಂ ಸೇವಕರಿಗೆ ಸಂವಿಧಾನ ದಿನದ ಪ್ರತಿಜ್ಞಾ ವಿಧಿ ಭೋದಿಸಿದರು.
ವೇದಿಕೆಯಲ್ಲಿ ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ ಉಪಸ್ಥಿತರಿದ್ದರು.
ಸ್ವಯಂ ಸೇವಕ ಕಾರ್ತಿಕ್ ಸ್ವಾಗತಿಸಿ ವಂದಿಸಿದರು. ಸ್ವಯಂ ಸೇವಕಿ ಧನ್ಯ ನಿರೂಪಿಸಿದರು.

Related posts

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya
error: Content is protected !!