25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

ಉಜಿರೆ: ಶಾಲಾ ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ  ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯು ಅನುಗ್ರಹ ಸಭಾಭವನದಲ್ಲಿ ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ಇವರು ಮಾತನಾಡುತ್ತಾ ಇದು ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕವಾಗಿದೆ ಇಲಾಖೆಯ ಪ್ರೋತ್ಸಾಹವನ್ನು ವಿದ್ಯಾರ್ಥಿಗಳು ಸದಪಯೋಗಪಡಿಸಿಕೊಂಡು ಸಾಧನೆ ಮಾಡಬೇಕಿದೆ ಎಂದು ಹೇಳಿದರು. ಸರ್ಕಾರಿ ಪ್ರೌಢಶಾಲೆ ಪುತ್ತಿಲ ಇಲ್ಲಿನ ಮುಖ್ಯಶಿಕ್ಷಕರಾದ ಶ್ರೀ ಮಹೇಂದ್ರ ಇವರು ವಿಜೇತ ವಿದ್ಯಾರ್ಥಿಗಳನ್ನು ಘೋಷಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಶಿಕ್ಷಣ ಸಂಯೋಜಕರಾದ ಶ್ರೀ ಸಿದ್ದಲಿಂಗಸ್ವಾಮಿ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ, ತೀರ್ಪುಗಾರರಾದ ಶ್ರೀ ಜೆರಾಲ್ಡ್ ,ಶ್ರೀ ಹರ್ಷಿತ್, ಶ್ರೀ ಶರತ್ ಕುಮಾರ್ ಉಪಸ್ಥಿತರಿದ್ದರು. ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಒಟ್ಟು 63 ತಂಡಗಳು ಭಾಗವಹಿಸಿದ್ದವು. ವೈಯಕ್ತಿಕ ವಿಭಾಗದಲ್ಲಿ ಪಂಚಮ್ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಪ್ರಥಮ. ಸಮನ್ಯು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ದ್ವಿತೀಯ, ರಾಯಿಸ್ಟನ್ ಲೂಯಿಸ್ ಸರಕಾರಿ ಉನ್ನತೀಕರಿಸಿದ ಶಾಲೆ ಕೊರಂಜ ತೃತೀಯ, ಸಾಮೂಹಿಕ ವಿಭಾಗದಲ್ಲಿ ಶಿವಪ್ರಸಾದ್ ಮತ್ತು ಎಡ್ವಿನ್ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಪ್ರಥಮ, ಸುಪ್ರಜಿತ್ ರಾವ್ ಮತ್ತು ಗ್ರಹೇಶ್ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ, ಮಹಮ್ಮದ್ ಹಫೀಳ್ ಮತ್ತು ಮಹಮ್ಮದ್ ಆಫ್ರಿನ್ ಸರ್ಕಾರಿ ಉನ್ನತಿಕರಿಸಿದ ಶಾಲೆ ಕೊರಂಜ ತೃತೀಯ ಸ್ಥಾನ ಪಡೆದುಕೊಂಡವು. ಈ ತಂಡಗಳು 29.11.2025 ರಂದು ಪುತ್ತೂರಿನಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿವೆ.

Related posts

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!