September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭ ವಿವಾಹ

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನೆಡಿಂಜಾರು ನಿವಾಸಿ ಚಂದ್ರಕಾಂತ್ ಹಾಗೂ ಬೆಳಾಲು ಕಡಂಬಿಲ ನಿವಾಸಿ ಸವಿತಾ ಅವರು ನ.24 ರಂದು ನಡ ಗ್ರಾಮದ ಕುತ್ರೊಟ್ಟು ದೇವಸ್ಥಾನದಲ್ಲಿ ವಿವಾಹವಾಗಿ ನ.27 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಬೆಳಾಲು ನಿವಾಸಿ ಸವಿತಾ (24 ವ) ಅವರು ನ.24ರಂದು ಉಜಿರೆಗೆ ಕೆಲಸಕ್ಕೆಂದು ಹೋದವರು ಕೆಲಸಕ್ಕೂ ಹೋಗದೆ, ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದೆ ಎಂದು ಅವರ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.

ಇದೀಗ ಅವರು ನೆರಿಯ ನಿವಾಸಿ ಚಂದ್ರಕಾಂತ್(26ವ) ಅವರನ್ನು ಕುತ್ರೋಟ್ಟು ದೇವಸ್ಥಾನದಲ್ಲಿ ವಿವಾಹವಾಗಿ, ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಾರೆ. ಇವರಿಬ್ಬರು ಸುಳ್ಯದಲ್ಲಿ ರಿಜಿಸ್ಟ್ರರ್ ಮ್ಯಾರೇಜ್ ಆಗಿ ಬಳಿಕ ಇಲ್ಲಿಯ ದೇವಸ್ಥಾನದಲ್ಲಿ ವಿವಾಹವಾದರೆನ್ನಲಾಗುತ್ತಿದೆ. ಪೊಲೀಸರು ಇಬ್ಬರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya
error: Content is protected !!