July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

ಬೆಳ್ತಂಗಡಿ: ಆರೋಗ್ಯ ಇಲಾಖೆಯಲ್ಲಿ ಸುಮಾರು 39 ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಬೆಳ್ತಂಗಡಿ ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಲೀಲಾವತಿ ಹೆಚ್.ಬಿ ಅವರು ನ.29ರಂದು ಸರಕಾರಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.

1986 ಅ.9ರಂದು ಬೆಳ್ತಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಕಿರಿಯ ಆರೋಗ್ಯ ಸಹಾಯಕಿಯಾಗಿ ಸೇವೆಗೆ ಸೇರಿದ ಅವರು ಬಳಿ ಪ್ರಾಥಮಿಕ ಆರೋಗ್ಯ ಕೇಂದ್ರ ನೆರಿಯ, ಮುಂಡಾಜೆ, ಪಡಂಗಡಿಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿಯಾಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿನ ಮಂಚಿ ಆರೋಗ್ಯ ಕೇಂದ್ರಕ್ಕೆ ವರ್ಗಾಗೊಂಡಿದ್ದರು. ಅಲ್ಲಿ ಪುಂಜಾಲಕಟ್ಟೆ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿದ ಬಳಿಕ ಕಳೆದ ಆರು ವರ್ಷಗಳಿಂದ ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿ ನ.29ರಂದು ನಿವೃತ್ತಿಯಾಗಲಿದ್ದಾರೆ.

ಗುರುವಾಯನಕೆರೆ ಶಿವಾಜಿನಗರದ ನಿವಾಸಿಯಾಗಿದ್ದಾರೆ. ಪತಿ ಮಂಗಳೂರು ಎ.ಸಿ ಕಚೇರಿಯಲ್ಲಿ ಮೆನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಿ. ಗೋವಿಂದ ನಾಯ್ಕ, ಪುತ್ರಿ ಶ್ರೀಮತಿ ಚೈತ್ರ ಶಿವಪ್ರಸಾದ್ ಕೆ.ಸಿ. ಬೆಂಗಳೂರು, ಪುತ್ರ ಜ್ಞಾನೇಶ್, ಮೊಮ್ಮಗ ನಿಶ್ಚಿತ್ ಕೆ.ಸಿಯವರೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

Related posts

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya
error: Content is protected !!