July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮುಂಡಾಜೆ: ಶಾಸಕಾಂಗ ಕಾರ್ಯಾಂಗ ಮತ್ತು ನ್ಯಾಯಾಂಗಗಳು ಸ್ವತಂತ್ರವಾಗಿದ್ದರೂ ಪರಸ್ಪರ ಪೂರಕವಾಗಿ ಕೆಲಸ ನಿರ್ವಹಿಸಬೇಕು. ಆದರೆ ಸುಮಾರು 88000 ಇತ್ಯರ್ಥವಾಗದ ವ್ಯಾಜ್ಯಗಳಿದ್ದರೂ ಅದನ್ನು ಇತ್ಯರ್ಥಪಡಿಸದೆ ಸುಪ್ರೀಂ ಕೋರ್ಟ್ ತನ್ನ ಅತಿಯಾದ ಕ್ರಿಯಾಶೀಲತೆಯಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯನಿರ್ವಹಣೆಯ ಮೇಲೆ ಹಸ್ತಕ್ಷೇಪ ನಡೆಸಿದಂತೆ ಇತ್ತೀಚೆಗೆ ಕಂಡು ಬರುತ್ತಿದೆ ಎಂದು ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ಅಭಿಪ್ರಾಯಪಟ್ಟರು.

ಅವರು ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿ ನ.26 ರಂದು ಕಾಲೇಜಿನ ಸಭಾಭವನದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆಂಗ್ಲ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

Related posts

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ-106 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!