July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ : ಕ್ರೀಡೆ ಶರೀರ ಮತ್ತು ಮನಸ್ಸಿಗೆ ಆರೋಗ್ಯವನ್ನು ನೀಡುವಂತಹುದು. ಉತ್ತಮ ಆರೋಗ್ಯದಲ್ಲಿ ವ್ಯಾಯಾಮದ ಮುಖ್ಯ ಪಾತ್ರವಿದೆ. ಹಾಗಾಗಿ ವಿದ್ಯಾರ್ಥಿಗಳು ಪಠ್ಯದ ಜತೆ ಕ್ರೀಡೆಯಲ್ಲೂ ಆಸಕ್ತಿಯಿಂದ ಭಾಗವಹಿಸಬೇಕು ‘ ಎಂದು ಟೆಲಿಕ್ವೆನ್ಸ್ ಫ್ರೈ. ಲಿಮಿಟೆಡ್ ಇದರ ನಿರ್ದೇಶಕ ಪ್ರವೀಣ್ ಗೋರೆ ಹೇಳಿದರು.

ಅವರು ನ.26 ರಂದು ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

‘ಇಂದಿನ ದಿನಗಳಲ್ಲಿ ನಮ್ಮ ಆರೋಗ್ಯದ ಕಡೆಗೆ ಹೆಚ್ಚು ಒತ್ತು ಕೊಡಬೇಕಾದ ಅಗತ್ಯವಿದೆ. ದಿನದ ಸ್ವಲ್ಪ ಸಮಯವನ್ನು ವ್ಯಾಯಾಮಕ್ಕಾಗಿ ಮೀಸಲಿಡಬೇಕು. ಹಾಗಾಗಿ ಒಂದಲ್ಲ ಒಂದು ಕ್ರೀಡೆಯಲ್ಲಿ ಅಭಿರುಚಿ ಬೆಳೆಸಿಕೊಂಡು ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಅವರು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಪ್ರೀತಿತಾ ಧರ್ಮವಿಜೇತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಬದುಕು ಚದುರಂಗದಾಟವಿದ್ದಂತೆ. ಸೋಲು ಗೆಲುವುಗಳು ಸಾಮಾನ್ಯವಾದುದು. ಆದರೆ ಗೆಲುವಿನ ಕಡೆಗೆ ಸದಾ ಶ್ರಮವಿರಬೇಕು. ವಿದ್ಯಾರ್ಥಿಗಳು ಸೋಲಿಗೆ ಹತಾಶರಾಗದೆ ಕ್ರೀಡಾಸ್ಪೂರ್ತಿಯನ್ನು ಮೆರೆಯಬೇಕು’ ಎಂದರು.
ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಕ್ರೀಡಾ ನಿರ್ದೇಶಕ ಭರತ್ ಇದ್ದರು.

ಉಪ ಪ್ರಾಂಶುಪಾಲ ಬಿ. ಎ.ಶಮೀವುಲ್ಲಾ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಮಾಯಾ ಭಟ್ ಪರಿಚಯಿಸಿದರು. ಇತಿಹಾಸ ಉಪನ್ಯಾಸಕ ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಭೌತಶಾಸ್ತ್ರ ಉಪನ್ಯಾಸಕಿ ಅನನ್ಯ ವಂದಿಸಿದರು.ಕಾಲೇಜಿನ ವಿದ್ಯಾರ್ಥಿ ಸಂಘದ ಕ್ರೀಡಾ ಕಾರ್ಯದರ್ಶಿ ಪಲ್ಲವಿ ಪ್ರತಿಜ್ಜಾ ವಿಧಿ ಬೋಧಿಸಿದರು.

Related posts

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
error: Content is protected !!