25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ನೊಂದ ಬಾಲಕಿ ವೇಣೂರು ಠಾಣಾ ವ್ಯಾಪ್ತಿ ಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿರುವ ವೇಳೆ ಅಲ್ಲಿದ್ದ ನೊಂದ ಬಾಲಕಿಯ ಅತ್ತೆಯ ಮಗ ಬಾಲಕಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ಬಂದ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದು ಅದರಂತೆ
ಆರೋಪಿ ಅಮ್ಜತ್ ಖಾನ್ (18ವ) ವಿರುದ್ದ ಠಾಣೆಯಲ್ಲಿ ನ.25 ರಂದು ಪ್ರಕರಣ ದಾಖಲಿಸಲಾಗಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ: ಯುವ ಘಟಕದ ಅಧ್ಯಕ್ಷರಾಗಿ ರಕ್ಷಿತ್ ಪುತ್ತಿಲ, ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya
error: Content is protected !!