July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಉಜಿರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ ” ಪ್ರಪಂಚದಲ್ಲಿಯೇ ಅತೀ ದೊಡ್ಡ ಹಾಗೂ ಸಮಗ್ರವಾದ ಸಂವಿಧಾನ ಹೊಂದಿರುವುದು ನಮ್ಮ ದೇಶದ ಹೆಮ್ಮೆ. ಸಂವಿಧಾನದಲ್ಲಿರುವ ಹಕ್ಕು ಕರ್ತವ್ಯಗಳು ಪ್ರತಿಯೊಬ್ಬ ನಾಗರಿಕರು ನಿರ್ಭಿತಿಯಿಂದ ಜೀವಿಸಲು ಸಾಧ್ಯವಾಗಿಸಿದೆ” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಸಹಾಯಕ ಪ್ರಧ್ಯಾಪಕರು ಹಾಗೂ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಟರಾಜ್ ಹೆಚ್ ಕೆ ಇವರು ಮಾತನಾಡಿ “ನಮ್ಮ ದೇಶದ ಸಂವಿಧಾನ ನಮ್ಮೆಲ್ಲರಿಗೂ ನೆಮ್ಮದಿಯಿಂದ ಬದುಕುವ ಅವಕಾಶ ಮಾಡಿಕೊಟ್ಟಿದೆ. ವಿವಿಧ ಜಾತಿ ಧರ್ಮ ಪ್ರಾದೇಶಿಕ ಭಿನ್ನತೆ ಎಲ್ಲವನ್ನು ಗಮನಿಸಿ ಸಮಾನತೆಯಿಂದ ಬದುಕುವ ಹಕ್ಕನ್ನು ನಮಗೆ ನೀಡಿದೆ. ಇದು ನಮ್ಮ ಸಂವಿಧಾನದ ವಿಶೇಷತೆ” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರು ಸ್ವಯಂ ಸೇವಕರಿಗೆ ಸಂವಿಧಾನ ದಿನದ ಪ್ರತಿಜ್ಞಾ ವಿಧಿ ಭೋದಿಸಿದರು.
ವೇದಿಕೆಯಲ್ಲಿ ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ ಉಪಸ್ಥಿತರಿದ್ದರು.
ಸ್ವಯಂ ಸೇವಕ ಕಾರ್ತಿಕ್ ಸ್ವಾಗತಿಸಿ ವಂದಿಸಿದರು. ಸ್ವಯಂ ಸೇವಕಿ ಧನ್ಯ ನಿರೂಪಿಸಿದರು.

Related posts

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ರಾಜ್ಯ ಪಠ್ಯಕ್ರಮ ಶಾಲೆಯ ವಾರ್ಷಿಕೋತ್ಸವ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya
error: Content is protected !!