September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

ಕಕ್ಕಿಂಜೆ : ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯ ವಿದ್ಯಾರ್ಥಿನಿಯರಿಗಾಗಿ ಹದಿಹರೆಯದ ಶಿಕ್ಷಣ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ನ.25 ರಂದು ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಯ ಸಭಾಂಗಣದಲ್ಲಿ ಆಯೋಜಿಸಲಾಯಿತು. ಮಂಗಳೂರು ಕೆ.ಎಂ.ಸಿ.ಯ ತಜ್ಞ ವೈದ್ಯೆ ಡಾ. ಕಾರುಣ್ಯ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕಿಶೋರಿ ವಯಸ್ಸಿನಲ್ಲಿ ಕಾಣಿಸಿಕೊಳ್ಳುವ ಶಾರೀರಿಕ–ಮಾನಸಿಕ ಬದಲಾವಣೆಗಳು, ಆರೋಗ್ಯ ಸಮಸ್ಯೆಗಳು ಹಾಗೂ ಅವುಗಳ ಪರಿಹಾರ ಕ್ರಮಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ಸ್ಪಷ್ಟ ಮತ್ತು ಪ್ರಾಯೋಗಿಕ ಮಾರ್ಗದರ್ಶನ ನೀಡಿದರು.

ಡಾ. ಕಾರುಣ್ಯ ಅವರು ತಿಂಗಳಿಗೆ ಒಮ್ಮೆ ಆಗುವ ಆರೋಗ್ಯ ಸಮಸ್ಯೆಗಳು, ಪೌಷ್ಠಿಕ ಆಹಾರದ ಅಗತ್ಯತೆ, ವೈಯಕ್ತಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ವಿಧಾನಗಳು ಮತ್ತು ಆತ್ಮರಕ್ಷಣೆ ಕುರಿತ ಮಾಹಿತಿಯನ್ನು ಉದಾಹರಣೆಗಳೊಂದಿಗೆ ವಿವರಿಸಿದರು. ವಿದ್ಯಾರ್ಥಿನಿಯರ ವಿವಿಧ ಪ್ರಶ್ನೆಗಳಿಗೆ ತಜ್ಞರು ಸಮರ್ಪಕ ಉತ್ತರ ನೀಡಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮವನ್ನು ಶ್ರೀಕೃಷ್ಣ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಶಾಲೆಯ ಶಿಕ್ಷಕ ವೃಂದ ಕಾರ್ಯಗತಗೊಳಿಸಲು ಸಹಕರಿಸಿದರು. ವಿದ್ಯಾರ್ಥಿನಿಯರಲ್ಲಿ ಆರೋಗ್ಯ ಜಾಗೃತಿ ಬೆಳೆಸುವ ಉದ್ದೇಶಕ್ಕೆ ಈ ಕಾರ್ಯಕ್ರಮ ನೆರವಾದಂತಾಗಿದೆ ಎಂದು ಆಯೋಜಕರು ತಿಳಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!