July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭ ವಿವಾಹ

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನೆಡಿಂಜಾರು ನಿವಾಸಿ ಚಂದ್ರಕಾಂತ್ ಹಾಗೂ ಬೆಳಾಲು ಕಡಂಬಿಲ ನಿವಾಸಿ ಸವಿತಾ ಅವರು ನ.24 ರಂದು ನಡ ಗ್ರಾಮದ ಕುತ್ರೊಟ್ಟು ದೇವಸ್ಥಾನದಲ್ಲಿ ವಿವಾಹವಾಗಿ ನ.27 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಬೆಳಾಲು ನಿವಾಸಿ ಸವಿತಾ (24 ವ) ಅವರು ನ.24ರಂದು ಉಜಿರೆಗೆ ಕೆಲಸಕ್ಕೆಂದು ಹೋದವರು ಕೆಲಸಕ್ಕೂ ಹೋಗದೆ, ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದೆ ಎಂದು ಅವರ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.

ಇದೀಗ ಅವರು ನೆರಿಯ ನಿವಾಸಿ ಚಂದ್ರಕಾಂತ್(26ವ) ಅವರನ್ನು ಕುತ್ರೋಟ್ಟು ದೇವಸ್ಥಾನದಲ್ಲಿ ವಿವಾಹವಾಗಿ, ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಾರೆ. ಇವರಿಬ್ಬರು ಸುಳ್ಯದಲ್ಲಿ ರಿಜಿಸ್ಟ್ರರ್ ಮ್ಯಾರೇಜ್ ಆಗಿ ಬಳಿಕ ಇಲ್ಲಿಯ ದೇವಸ್ಥಾನದಲ್ಲಿ ವಿವಾಹವಾದರೆನ್ನಲಾಗುತ್ತಿದೆ. ಪೊಲೀಸರು ಇಬ್ಬರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

Related posts

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya
error: Content is protected !!