25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭ ವಿವಾಹ

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನೆಡಿಂಜಾರು ನಿವಾಸಿ ಚಂದ್ರಕಾಂತ್ ಹಾಗೂ ಬೆಳಾಲು ಕಡಂಬಿಲ ನಿವಾಸಿ ಸವಿತಾ ಅವರು ನ.24 ರಂದು ನಡ ಗ್ರಾಮದ ಕುತ್ರೊಟ್ಟು ದೇವಸ್ಥಾನದಲ್ಲಿ ವಿವಾಹವಾಗಿ ನ.27 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಬೆಳಾಲು ನಿವಾಸಿ ಸವಿತಾ (24 ವ) ಅವರು ನ.24ರಂದು ಉಜಿರೆಗೆ ಕೆಲಸಕ್ಕೆಂದು ಹೋದವರು ಕೆಲಸಕ್ಕೂ ಹೋಗದೆ, ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದೆ ಎಂದು ಅವರ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.

ಇದೀಗ ಅವರು ನೆರಿಯ ನಿವಾಸಿ ಚಂದ್ರಕಾಂತ್(26ವ) ಅವರನ್ನು ಕುತ್ರೋಟ್ಟು ದೇವಸ್ಥಾನದಲ್ಲಿ ವಿವಾಹವಾಗಿ, ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಾರೆ. ಇವರಿಬ್ಬರು ಸುಳ್ಯದಲ್ಲಿ ರಿಜಿಸ್ಟ್ರರ್ ಮ್ಯಾರೇಜ್ ಆಗಿ ಬಳಿಕ ಇಲ್ಲಿಯ ದೇವಸ್ಥಾನದಲ್ಲಿ ವಿವಾಹವಾದರೆನ್ನಲಾಗುತ್ತಿದೆ. ಪೊಲೀಸರು ಇಬ್ಬರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya
error: Content is protected !!