September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭ ವಿವಾಹ

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನೆಡಿಂಜಾರು ನಿವಾಸಿ ಚಂದ್ರಕಾಂತ್ ಹಾಗೂ ಬೆಳಾಲು ಕಡಂಬಿಲ ನಿವಾಸಿ ಸವಿತಾ ಅವರು ನ.24 ರಂದು ನಡ ಗ್ರಾಮದ ಕುತ್ರೊಟ್ಟು ದೇವಸ್ಥಾನದಲ್ಲಿ ವಿವಾಹವಾಗಿ ನ.27 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಬೆಳಾಲು ನಿವಾಸಿ ಸವಿತಾ (24 ವ) ಅವರು ನ.24ರಂದು ಉಜಿರೆಗೆ ಕೆಲಸಕ್ಕೆಂದು ಹೋದವರು ಕೆಲಸಕ್ಕೂ ಹೋಗದೆ, ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದೆ ಎಂದು ಅವರ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.

ಇದೀಗ ಅವರು ನೆರಿಯ ನಿವಾಸಿ ಚಂದ್ರಕಾಂತ್(26ವ) ಅವರನ್ನು ಕುತ್ರೋಟ್ಟು ದೇವಸ್ಥಾನದಲ್ಲಿ ವಿವಾಹವಾಗಿ, ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಾರೆ. ಇವರಿಬ್ಬರು ಸುಳ್ಯದಲ್ಲಿ ರಿಜಿಸ್ಟ್ರರ್ ಮ್ಯಾರೇಜ್ ಆಗಿ ಬಳಿಕ ಇಲ್ಲಿಯ ದೇವಸ್ಥಾನದಲ್ಲಿ ವಿವಾಹವಾದರೆನ್ನಲಾಗುತ್ತಿದೆ. ಪೊಲೀಸರು ಇಬ್ಬರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಏಕರೂಪ ಸಮವಸ್ತ್ರ ನೀತಿ ಪಾಲನೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆ ಅಕ್ರಮ ಗೋಹತ್ಯೆ ತಡೆಗೆ ಆಗ್ರಹ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್ ರಿಗೆ ಮನವಿ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!