July 23, 2026
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

ಬೆಳ್ತಂಗಡಿ : ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಹೊಂದಿರುವ ವಾರ್ಡ್ ಗಳಲ್ಲಿ ನಡೆಸಿದ ಅಭಿವೃದ್ಧಿ ಯೋಜನೆ, ಕುಂದುಕೊರತೆ, ಹಾಗೂ ಕಾರ್ಯಕರ್ತರು ಮತ್ತು ಚುನಾಯಿತ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸುವ ಪಕ್ಷದ ತೀರ್ಮಾನದಂತೆ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚಾರ್ಮಾಡಿ, ಲಾಯಿಲ, ಕುವೆಟ್ಟು, ಪೆರಾಲ್ದರಕಟ್ಟೆ, ತಣ್ಣೀರುಪಂತ ಹಾಗೂ ಕುಕ್ಕಳ ವಾರ್ಡ್ ಗಳಿಗೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗವು ಬುಧವಾರದಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಧ್ಯಕ್ಷರ ನಿಯೋಗವನ್ನು ಸ್ಥಳೀಯ ಚುನಾಯಿತ ಸದಸ್ಯರು ಹಾಗೂ ಕಾರ್ಯಕರ್ತರು ಹೂಗುಚ್ಚ ನೀಡಿ ಸ್ವಾಗತಿಸಿದರು. ಗ್ರಾಮ ಪಂ ಎಸ್‌ಡಿಪಿಐ ಬೆಂಬಲಿತ ಸದಸ್ಯರು ತಮ್ಮ ವಾರ್ಡ್ ನಲ್ಲಿ ನಡೆಸಿದ ಅಭಿವೃದ್ಧಿ ಯೋಜನೆಗಳು, ಪಂಚಾಯತ್ ವತಿಯಿಂದ ಮಾಡಿಸಿದ ಕೆಲಸ ಕಾರ್ಯಗಳ ಬಗ್ಗೆ ನಿಯೋಗಕ್ಕೆ ಮಾಹಿತಿ ನೀಡಿದರು.ನಿಯೋಗದಲ್ಲಿ ಜಿಲ್ಲಾ ಉಪಾಧ್ಯಕ್ಷರು ಇನಾಸ್ ರೋಡ್ರಿಗಸ್, ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ನವಾಝ್ ಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಅಲೆಕ್ಕಾಡಿ, ನ್ಯಾಯವಾದಿ ಕಬೀರ್ ಕೆಮ್ಮಾರ, ಹನೀಫ್ ಪುಂಜಾಲಕಟ್ಟೆ, ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಉಪಸ್ಥಿತರಿದ್ದರು.

Related posts

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya
error: Content is protected !!