ಬೆಳ್ತಂಗಡಿ : ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದಲ್ಲಿ ಸಂವಿಧಾನ ಪೀಠಿಕೆ ಓದುವ ಮೂಲಕ ಸಂವಿಧಾನ ದಿನವನ್ನು ಆಚರಿಸಿದರು.
ಕಕ್ಕಿಂಜೆಯಲ್ಲಿರುವ ಪಕ್ಷದ ಬ್ಲಾಕ್ ಕಚೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ನವಾಝ್ ಷರೀಫ್ ಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಅಲೆಕ್ಕಾಡಿ, ನ್ಯಾಯವಾದಿ ಕಬೀರ್ ಕೆಮ್ಮಾರ, ಹನೀಫ್ ಪೂಂಜಾಲ್ ಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಅಶ್ಫಾಕ್ ಪೂಂಜಾಲಕಟ್ಟೆ, ಗ್ರಾಮ ಪಂಚಾಯತ್ ಸದಸ್ಯ ಸಿದ್ದೀಕ್ ಯು ಪಿ, ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರು ಭಾಗಿಯಾದರು.











