September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮುಂಡಾಜೆ: ಶಾಸಕಾಂಗ ಕಾರ್ಯಾಂಗ ಮತ್ತು ನ್ಯಾಯಾಂಗಗಳು ಸ್ವತಂತ್ರವಾಗಿದ್ದರೂ ಪರಸ್ಪರ ಪೂರಕವಾಗಿ ಕೆಲಸ ನಿರ್ವಹಿಸಬೇಕು. ಆದರೆ ಸುಮಾರು 88000 ಇತ್ಯರ್ಥವಾಗದ ವ್ಯಾಜ್ಯಗಳಿದ್ದರೂ ಅದನ್ನು ಇತ್ಯರ್ಥಪಡಿಸದೆ ಸುಪ್ರೀಂ ಕೋರ್ಟ್ ತನ್ನ ಅತಿಯಾದ ಕ್ರಿಯಾಶೀಲತೆಯಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯನಿರ್ವಹಣೆಯ ಮೇಲೆ ಹಸ್ತಕ್ಷೇಪ ನಡೆಸಿದಂತೆ ಇತ್ತೀಚೆಗೆ ಕಂಡು ಬರುತ್ತಿದೆ ಎಂದು ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ಅಭಿಪ್ರಾಯಪಟ್ಟರು.

ಅವರು ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿ ನ.26 ರಂದು ಕಾಲೇಜಿನ ಸಭಾಭವನದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆಂಗ್ಲ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

Related posts

ಪೆರಿಂಜೆ: ಗೀತಾ ನಿಧನ

Suddi Udaya

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya
error: Content is protected !!