24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮುಂಡಾಜೆ: ಶಾಸಕಾಂಗ ಕಾರ್ಯಾಂಗ ಮತ್ತು ನ್ಯಾಯಾಂಗಗಳು ಸ್ವತಂತ್ರವಾಗಿದ್ದರೂ ಪರಸ್ಪರ ಪೂರಕವಾಗಿ ಕೆಲಸ ನಿರ್ವಹಿಸಬೇಕು. ಆದರೆ ಸುಮಾರು 88000 ಇತ್ಯರ್ಥವಾಗದ ವ್ಯಾಜ್ಯಗಳಿದ್ದರೂ ಅದನ್ನು ಇತ್ಯರ್ಥಪಡಿಸದೆ ಸುಪ್ರೀಂ ಕೋರ್ಟ್ ತನ್ನ ಅತಿಯಾದ ಕ್ರಿಯಾಶೀಲತೆಯಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯನಿರ್ವಹಣೆಯ ಮೇಲೆ ಹಸ್ತಕ್ಷೇಪ ನಡೆಸಿದಂತೆ ಇತ್ತೀಚೆಗೆ ಕಂಡು ಬರುತ್ತಿದೆ ಎಂದು ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ಅಭಿಪ್ರಾಯಪಟ್ಟರು.

ಅವರು ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿ ನ.26 ರಂದು ಕಾಲೇಜಿನ ಸಭಾಭವನದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆಂಗ್ಲ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

Related posts

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya
error: Content is protected !!