ಬೆಳ್ತಂಗಡಿ: ಆರೋಗ್ಯ ಇಲಾಖೆಯಲ್ಲಿ ಸುಮಾರು 39 ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಬೆಳ್ತಂಗಡಿ ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಲೀಲಾವತಿ ಹೆಚ್.ಬಿ ಅವರು ನ.29ರಂದು ಸರಕಾರಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986 ಅ.9ರಂದು ಬೆಳ್ತಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಕಿರಿಯ ಆರೋಗ್ಯ ಸಹಾಯಕಿಯಾಗಿ ಸೇವೆಗೆ ಸೇರಿದ ಅವರು ಬಳಿ ಪ್ರಾಥಮಿಕ ಆರೋಗ್ಯ ಕೇಂದ್ರ ನೆರಿಯ, ಮುಂಡಾಜೆ, ಪಡಂಗಡಿಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿಯಾಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿನ ಮಂಚಿ ಆರೋಗ್ಯ ಕೇಂದ್ರಕ್ಕೆ ವರ್ಗಾಗೊಂಡಿದ್ದರು. ಅಲ್ಲಿ ಪುಂಜಾಲಕಟ್ಟೆ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿದ ಬಳಿಕ ಕಳೆದ ಆರು ವರ್ಷಗಳಿಂದ ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿ ನ.29ರಂದು ನಿವೃತ್ತಿಯಾಗಲಿದ್ದಾರೆ.
ಗುರುವಾಯನಕೆರೆ ಶಿವಾಜಿನಗರದ ನಿವಾಸಿಯಾಗಿದ್ದಾರೆ. ಪತಿ ಮಂಗಳೂರು ಎ.ಸಿ ಕಚೇರಿಯಲ್ಲಿ ಮೆನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಿ. ಗೋವಿಂದ ನಾಯ್ಕ, ಪುತ್ರಿ ಶ್ರೀಮತಿ ಚೈತ್ರ ಶಿವಪ್ರಸಾದ್ ಕೆ.ಸಿ. ಬೆಂಗಳೂರು, ಪುತ್ರ ಜ್ಞಾನೇಶ್, ಮೊಮ್ಮಗ ನಿಶ್ಚಿತ್ ಕೆ.ಸಿಯವರೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.











