25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭ ವಿವಾಹ

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನೆಡಿಂಜಾರು ನಿವಾಸಿ ಚಂದ್ರಕಾಂತ್ ಹಾಗೂ ಬೆಳಾಲು ಕಡಂಬಿಲ ನಿವಾಸಿ ಸವಿತಾ ಅವರು ನ.24 ರಂದು ನಡ ಗ್ರಾಮದ ಕುತ್ರೊಟ್ಟು ದೇವಸ್ಥಾನದಲ್ಲಿ ವಿವಾಹವಾಗಿ ನ.27 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಬೆಳಾಲು ನಿವಾಸಿ ಸವಿತಾ (24 ವ) ಅವರು ನ.24ರಂದು ಉಜಿರೆಗೆ ಕೆಲಸಕ್ಕೆಂದು ಹೋದವರು ಕೆಲಸಕ್ಕೂ ಹೋಗದೆ, ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದೆ ಎಂದು ಅವರ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.

ಇದೀಗ ಅವರು ನೆರಿಯ ನಿವಾಸಿ ಚಂದ್ರಕಾಂತ್(26ವ) ಅವರನ್ನು ಕುತ್ರೋಟ್ಟು ದೇವಸ್ಥಾನದಲ್ಲಿ ವಿವಾಹವಾಗಿ, ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಾರೆ. ಇವರಿಬ್ಬರು ಸುಳ್ಯದಲ್ಲಿ ರಿಜಿಸ್ಟ್ರರ್ ಮ್ಯಾರೇಜ್ ಆಗಿ ಬಳಿಕ ಇಲ್ಲಿಯ ದೇವಸ್ಥಾನದಲ್ಲಿ ವಿವಾಹವಾದರೆನ್ನಲಾಗುತ್ತಿದೆ. ಪೊಲೀಸರು ಇಬ್ಬರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

Related posts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya
error: Content is protected !!