July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮುಂಡಾಜೆ: ಶಾಸಕಾಂಗ ಕಾರ್ಯಾಂಗ ಮತ್ತು ನ್ಯಾಯಾಂಗಗಳು ಸ್ವತಂತ್ರವಾಗಿದ್ದರೂ ಪರಸ್ಪರ ಪೂರಕವಾಗಿ ಕೆಲಸ ನಿರ್ವಹಿಸಬೇಕು. ಆದರೆ ಸುಮಾರು 88000 ಇತ್ಯರ್ಥವಾಗದ ವ್ಯಾಜ್ಯಗಳಿದ್ದರೂ ಅದನ್ನು ಇತ್ಯರ್ಥಪಡಿಸದೆ ಸುಪ್ರೀಂ ಕೋರ್ಟ್ ತನ್ನ ಅತಿಯಾದ ಕ್ರಿಯಾಶೀಲತೆಯಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯನಿರ್ವಹಣೆಯ ಮೇಲೆ ಹಸ್ತಕ್ಷೇಪ ನಡೆಸಿದಂತೆ ಇತ್ತೀಚೆಗೆ ಕಂಡು ಬರುತ್ತಿದೆ ಎಂದು ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ಅಭಿಪ್ರಾಯಪಟ್ಟರು.

ಅವರು ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿ ನ.26 ರಂದು ಕಾಲೇಜಿನ ಸಭಾಭವನದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆಂಗ್ಲ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

Related posts

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!